ಅಲೆದು ಕುರಿ ಮೇಯಿಸುವ ಕುರಿಗಾಹಿಯ ಪುತ್ರ ಯುಪಿಎಸ್​ ಸಿ ಪರೀಕ್ಷೆಯಲ್ಲಿ ದೇಶಕ್ಕೆ 551 ರ‍್ಯಾಂಕ್ ಪಡೆದಿದ್ದಾರೆ

ಬೆಳಗಾವಿ :–

ಬೀರಪ್ಪ ಸಿದ್ದಪ್ಪ ಡೋಣಿ ಕುರಿ ಕಾಯುತ್ತಿರುವಾಗಲೇ ಯುಪಿಎಸ್ಸಿ ಫಲಿತಾಂಶ ಬಂದಿದ್ದು, ತಾನು ಪಾಸಾದ ಸುದ್ದಿ ತಿಳಿದು ಕುಣಿದು ಕುಪ್ಪಳಿಸಿದ್ದಾರೆ.

ಯುವಕ ಬೀರಪ್ಪ ಕುರಿ ಕಾಯುತ್ತಾ ಯುಪಿಎಸ್​ಸಿಗೆ ತಯಾರಿ ನಡೆಸಿದ್ದರು. ಬೀರಪ್ಪ ಅವರ ಸಾಧನೆಗೆ ಕುಟುಂಬಸ್ಥರು ಮತ್ತು ಗ್ರಾಮಸ್ಥರು ಫುಲ್ ಖುಷ್ ಆಗಿದ್ದಾರೆ.

ಯುವಕ ಬೀರಪ್ಪ ಸದ್ಯ

ತಾಲೂಕಿನ ನಾನಾವಾಡಿಯಲ್ಲಿದ್ದು, ಗದ್ದೆಯೊಂದರಲ್ಲಿ ಕುರಿ ಮೇಯಿಸುತ್ತಿದ್ದಾರೆ.

ಬೀರಪ್ಪ ಅವರ ಸಾಧನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಮಾಡಿ ಅಭಿನಂದನೆ ಸಲ್ಲಿಸಿದ್ದಾರೆ.

ಕಾಡು-ಮೇಡು ಅಲೆದು ಕುರಿ ಮೇಯಿಸುವ ಕುರಿಗಾಹಿಯ ಪುತ್ರ ಯುಪಿಎಸ್​ ಸಿ ಪರೀಕ್ಷೆಯಲ್ಲಿ ದೇಶಕ್ಕೆ 551 ರ‍್ಯಾಂಕ್ ಪಡೆದಿದ್ದಾರೆ. ಮಹಾರಾಷ್ಟ್ರ ರಾಜ್ಯದ ಕೊಲ್ಹಾಪುರ ಜಿಲ್ಲೆಯ ಕಾಗಲ್ ತಾಲೂಕಿನ ಎಮಗೆ ಗ್ರಾಮದ ಸಿದ್ದಪ್ಪ ಹಾಗೂ ಬಾಳವ್ವ ಡೋಣಿ ದಂಪತಿಗಳ ತೃತಿಯ ಸುಪುತ್ರ ಬೀರಪ್ಪ ಸಿದ್ದಪ್ಪ ಡೋಣಿ ಯುಪಿಎಸ್​ಸಿ ಪರೀಕ್ಷೆಯಲ್ಲಿ ಪಾಸಾಗಿದ್ ಕುಟುಂಬಸ್ಥರು ಬೀರಪ್ಪ ಅವರಿಗೆ

ಆರತಿ ಎತ್ತಿ ಹಾರ ಹಾಕಿ ಕೈಗೆ ಕುರಿ ಮರಿ ಕೊಟ್ಟು ಸ್ಮಾನಿಸಿದರು. ಬೀರಪ್ಪ ಅವರು ಐಪಿಎಸ್ ಆಫೀಸರ್ ಆಗಿ ಕೆಲಸ ಮಾಡುವ ಇಂಗಿತ ವ್ಯಕ್ತಪಡಿಸಿದ್ದಾರೆ.

Share this post:

Leave a Reply

Your email address will not be published. Required fields are marked *