ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ರಾಗಿ 2 ಕೆಜಿ ಅಕ್ಕಿ, “ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ಜೋಳ ಮತ್ತು 2 ಕೆಜಿ ಅಕ್ಕಿ” ನೀಡಲಾಗುವುದು.

ಬೆಂಗಳೂರು :–

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಅನ್ನಭಾಗ್ಯ ಯೋಜನೆಯಡಿ ಕೋಟ್ಯಂತರ ಜನರಿಗೆ ಉಚಿತವಾಗಿ ತಲಾ 10 ಕೆಜಿ ಅಕ್ಕಿ ವಿತರಿಸುತ್ತಿದ್ದು,

ಇದರೊಂದಿಗೆ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ರಾಗಿ ಹಾಗೂ 2 ಕೆಜಿ ಅಕ್ಕಿ, ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ 3 ಕೆಜಿ ಜೋಳ ಮತ್ತು 2 ಕೆಜಿ ಅಕ್ಕಿ ನೀಡಲಾಗುವುದು.

ಫಲಾನುಭವಿಗಳಿಗೆ ನೀಡುತ್ತಿರುವ ಒಟ್ಟು ಪ್ರಮಾಣದಲ್ಲಿ ಪದಾರ್ಥಗಳನ್ನು ಬದಲಾವಣೆ ಮಾಡಲಾಗುತ್ತದೆ. ಕೆಲವು ಭಾಗದಲ್ಲಿ ರಾಗಿ ಬಳಕೆ ಮಾಡಿದರೆ ಮತ್ತೆ ಕೆಲವು ಕಡೆ ಜೋಳ ಬಳಸುತ್ತಾರೆ. ಹೀಗಾಗಿ ಜನ ಏನನ್ನು ಇಷ್ಟಪಡುತ್ತಾರೋ ಅದನ್ನೇ ನೀಡಲಾಗುವುದು ಎಂದು ಹೇಳಲಾಗಿದೆ.

ರೈತರಿಂದ ಬೆಂಬಲ ಬೆಲೆಯಲ್ಲಿ ಭತ್ತ, ರಾಗಿ ಜೋಳವನ್ನು ಖರೀದಿಸಿ ಸಂಗ್ರಹಿಸಲಾಗುತ್ತಿದೆ. ಮೇ ತಿಂಗಳವರೆಗೆ ಖರೀದಿ ನಡೆಯಲಿದ್ದು, 10 ತಿಂಗಳಿಗೆ ವಿತರಿಸುವಷ್ಟು ರಾಗಿ, ಜೋಳ ಖರೀದಿಸಿ ಸಂಗ್ರಹಿಸಿ ಇಡಲಾಗುತ್ತದೆ.

ಕೇಂದ್ರ ಸರ್ಕಾರಕ್ಕೆ ರಾಗಿ, ಜೋಳ ವಿತರಣೆ ಸಂಬಂಧ ಪ್ರಸ್ತಾವನೆ ಸಲ್ಲಿಸಲಾಗಿದೆ. ಬೆಂಬಲ ಬೆಲೆ ಯೋಜನೆಯಡಿ ರಾಗಿ,
ಜೋಳವನ್ನು ಕೇಂದ್ರದ ಅನುಮತಿ ಮೇರೆಗೆ ಮೇ ತಿಂಗಳಿನಿಂದ ವಿತರಿಸಲಾಗುವುದು.

ರಾಜ್ಯದಲ್ಲಿ 1,16,51,209 ಬಿಪಿಎಲ್ ಕಾರ್ಡುಗಳಿದ್ದು, 3,93,29,981 ಫಲಾನುಭವಿಗಳು ಇದ್ದಾರೆ. 10,83,977 ಅಂತ್ಯೋದಯ ಕಾರ್ಡುಗಳಿದ್ದು 43,81,789 ಫಲಾನುಭವಿಗಳಿದ್ದಾರೆ.

ವಿತರಣೆಗೆ ಮಾಸಿಕ 30,000 ಮೆಟ್ರಿಕ್ ಟನ್ ರಾಗಿ, 8,000 ಮೆಟ್ರಿಕ್ ಟನ್ ಜೋಳ ಬೇಕಾಗುತ್ತದೆ ಎಂದು ಅಂದಾಜಿಸಲಾಗಿದ್ದು, ಮೇ ತಿಂಗಳಿನಿಂದ ಅಕ್ಕಿಯ ಜತೆಗೆ ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ರಾಗಿ, ಜೋಳ ವಿತರಿಸಲಾಗುವುದು ಎಂದು ಹೇಳಲಾಗಿದೆ.

Share this post:

Leave a Reply

Your email address will not be published. Required fields are marked *