“ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು. ಎಲ್ಲರಿಗೂ ಅವಕಾಶ ಸಿಗುತ್ತೆ” : ಸಚಿವ ಸತೀಶ್‌ ಜಾರಕಿಹೊಳಿ

ಬೆಳಗಾವಿ :–

ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ,

ಡಿಸೆಂಬರ್ ಇನ್ನೂ ಬಹಳ ದೂರವಿದೆ. ಆದಾಗ ನೋಡೋಣ ಎಂದು ಹೇಳಿದ್ದಾರೆ.

ನಗರದಲ್ಲಿ ಮಾತನಾಡಿದ ಸಚಿವ ಸತೀಶ್‌ ಜಾರಕಿಹೊಳಿ, 30 ತಿಂಗಳ ಬಳಿಕ ಸಚಿವರಾಗಬೇಕು ಎಂದು ಬಹಳಷ್ಟು ಶಾಸಕರ ಒತ್ತಾಸೆಯಿದೆ.
ಸಚಿವ ಸಂಪುಟ ವಿಸ್ತರಣೆಯಾದರೆ ಒಳ್ಳೆಯದು. ಎಲ್ಲರಿಗೂ ಅವಕಾಶ ಸಿಗುತ್ತೆ ಎಂದಿದ್ದಾರೆ.

ಈ ಬಗ್ಗೆ ನಿರ್ಧಾರ ಮಾಡುವುದು ಹೈಕಮಾಂಡ್. ನಮ್ಮ ಮಟ್ಟದಲ್ಲಿ ಇಲ್ಲ. ಸಚಿವರ ಕಾರ್ಯವೈಖರಿ ಬಗ್ಗೆ ಯಾವುದೇ ಚರ್ಚೆಯಾಗಿಲ್ಲ.

“ಸಂಪುಟ ವಿಸ್ತರಣೆಯಾದರೆ ಹೊಸ ಲೀಡರ್ ಶಿಪ್ ಬೆಳೆಯುತ್ತದೆ” ಎಂದು ಹೇಳಿದರು.

Share this post:

Leave a Reply

Your email address will not be published. Required fields are marked *

You cannot copy content of this page