“ರೂ.೪೦ ಬಿಲ್ಲು ಹಣ ತುಂಬದ ಕಾರಣ ಮಾಜಿ ಮುಖ್ಯಮಂತ್ರಿ ಎಸ್ ನಿಜಲಿಂಗಪ್ಪ ನವರ ಮನೆ ದೂರವಾಣಿ ಸಂಪರ್ಕವನ್ನು ಇಲಾಖೆ ಕತ್ತರಿಸಿ ಹಾಕಿತ್ತು”

ಏಳು ವರ್ಷ ಸಿಎಂ ಆಗಿದ್ದ ನಿಜಲಿಂಗಪ್ಪ ಅವರಲ್ಲಿ ಸ್ವಂತ ಕಾರು ಇರಲಿಲ್ಲ. ಚಿತ್ರದುರ್ಗದಿಂದ ಬೆಂಗಳೂರಿಗೆ ಹೋಗಬೇಕೆನಿಸಿದಾಗ ಅಥವಾ ಇನ್ನೆಲ್ಲೋ ಓಡಾಟವಿದೆ ಎಂದಾಗ ಸ್ನೇಹಿತರ ಕಾರಿನಲ್ಲಿ ಅವರು ಹೋಗಿ ಬರುತ್ತಿದ್ದರು.

ಬಿದ್ದು ಕಾಲು ಮುರಿದಾಗ ತಮ್ಮನ್ನು ಬೆಂಗಳೂರಿನಲ್ಲಿರುವ ಸರ್ಕಾರಿ ಬೌರಿಂಗ್ ಆಸ್ಪತ್ರೆಗೆ ದಾಖಲು ಮಾಡುವಂತೆ ಸರ್ಕಾರವನ್ನು ಕೋರಿದ್ದರು. ಖಾಸಗಿ ಆಸ್ಪತ್ರೆಗೆ ಸೇರಿಸುವ ಅಂದಿನ ಮುಖ್ಯಮಂತ್ರಿಯ ಸಲಹೆಯನ್ನು ಅವರು ನಿರಾಕರಿಸಿದ್ದರು.

ಅಂದಿನ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಚಿಕಿತ್ಸೆಗೆಂದು ವಿದೇಶಕ್ಕೆ ಹೋಗಿದ್ದರು.ಅಲ್ಲಿಂದ ತಮ್ಮ ರಾಜಕೀಯ ಗುರುವಿನ ಜೊತೆ ಮಾತಾಡಲು ಬಯಸಿ ಫೋನ್ ತಿರುಗಿಸಿದರೆ ಈ ನಂಬರ್ ಚಾಲನೆಯಲ್ಲಿ ಎಂಬ ಉತ್ತರ ಬಂತು. ಎಷ್ಟು ಬಾರಿ ಫೋನ್ ಮಾಡಿದರೂ ಇದೇ ಉತ್ತರ.

ಹೆಗಡೆಯವರು ಅಲ್ಲಿಂದ ತಮ್ಮ ಆಪ್ತ ಸಹಾಯಕ ರಾಮಪ್ಪನವರಿಗೆ ಫೋನ್ ಮಾಡಿ ರಾಮಪ್ಪ ಚಿತ್ರದುರ್ಗ ಎಸ್ ಪಿ ಯನ್ನು ಸಂಪರ್ಕಿಸಿ ಹಕಿಕತ್ ವಿವರಿಸಿದರು. ಶಂಕರ್ ಬಿದರಿ ಯವರು ಆಗ ಚಿತ್ರದುರ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿದ್ದರು. ಎಸ್ ಪಿ ಯಾಗಿ ಆಯ್ಕೆಯಾಗುವ ಪೂರ್ವದಲ್ಲಿ ದೂರವಾಣಿ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಏನು ಆಗಿರಬಹುದು ಎಂಬುದನ್ನು ಅವರು ಸರಿಯಾಗಿ ಊಹಿಸಿದರು ರೂ.೪೦ ಬಿಲ್ಲು ಹಣ ತುಂಬದ ಕಾರಣ ಮಾಜಿ ಮುಖ್ಯಮಂತ್ರಿ ಮನೆ ದೂರವಾಣಿ ಸಂಪರ್ಕವನ್ನು ಇಲಾಖೆ ಕತ್ತರಿಸಿ ಹಾಕಿತ್ತು.

ತುಂಬ ಬೇಕಿದ್ದ ಬಾಕಿ ಮೊತ್ತವಾದರೂ ಎಷ್ಟು ಅಂತೀರಿ. ೧೦,೨೦ ಸಾವಿರವೇ? ಅಲ್ವೇ ಅಲ್ಲ. ಬರೀ ರೂ.೪೦ ಅಷ್ಟೇ. ಹಲವು ತಿಂಗಳುಗಳಿಂದ ಬಾಕಿ ಇರಿಸಿಕೊಂಡಿದ್ದರಿಂದ ಇಲಾಖೆಯ ನಿಯಮನುಸಾರ ಟೆಲಿಫೋನ್ ಸಂಪರ್ಕ ಕಡಿದು ಹಾಕಲಾಗಿದೆ ಎಂಬ ಮಾಹಿತಿ ಸಂಗ್ರಹಿಸಿದ ಬಿದರಿ ಅವರು ರೂ.೪೦ ಜೊತೆಗೆ ಮರು ಸಂಪರ್ಕಕ್ಕೆ ೨೫ ರೂಪಾಯಿ ದಂಡ ಕಟ್ಟಿ ಒಟ್ಟು ೬೫ ರೂಪಾಯಿಗಳನ್ನು ಅವರಿಗೆ ಗೊತ್ತಾಗದೆ ಪಾವತಿಸಿದ್ದರು.

ಮನೆಯಲ್ಲಿ ಏನನ್ನೋ ಓದುತ್ತಾ ಕುಳಿತಿದ್ದ ಎಸ್ ಎನ್ ಅವರಿಗೆ ಫೋನ್ ರಿಂಗಣಿಸಿದಾಗ ಅಚ್ಚರಿ. ಆ ಕಡೆಯಿಂದ ಹಲೋ ಸರ್ ಎಂದವರು ಹೆಗಡೆ. ಆಗ ಏನನ್ನು ಹೇಳಲು ಎಸ್ ನಿಜಲಿಂಗಪ್ಪ ನವರು ನಾನು ಬಿಲ್ಲು ತುಂಬಿರಲಿಲ್ಲ ಯಾರು ಈ ಕೆಲಸ ಮಾಡಿದ್ದು ವಿಚಾರಿಸಿ ಎಂದು ತಮ್ಮ ವಿಶ್ವಾಸಿಕರೊಬ್ಬರನ್ನು ಕೋರಿದರು.

ಟೆಲಿಫೋನ್ ಎಕ್ಸ್ಚೇಂಜ್ ನಲ್ಲಿ ಅವರು ವಿಚಾರಿಸಿದಾಗ ಎಸ್ಪಿ ಎಂಬುದು ಗೊತ್ತಾಯ್ತು. ತಮ್ಮ ಆತ್ಮಕಥನ ಸತ್ಯಮೇವ ಜಯತೆಯಲ್ಲಿ ಶಂಕರ್ ಬಿದರಿಯವರು ಈ ಘಟನೆಯನ್ನು ಪ್ರಸ್ತಾಪಿಸಿದ್ದಾರೆ.

ಎಸ್ ನಿಜಲಿಂಗಪ್ಪ ನವರು ತಡಮಾಡಲಿಲ್ಲ ಬಿದರಿಯವರನ್ನು ಮನೆಗೆ ಕರೆಸಿಕೊಂಡು ಮಾತಾಡಿಸಿ ಕಾಫಿ ಕುಡಿಸಿ ಮುಂದಿನ ತಿಂಗಳು ಮೊದಲ ವಾರ ಬನ್ನಿ ಎಂದರು. ಅದರಂತೆ ಬಿದರಿಯವರು ಎಸ್ಎನ್ ಅವರ ಮನೆಗೆ ಹೋದಾಗ ಒಂದು ಕವರಿನಲ್ಲಿ ೬೫ ಇಟ್ಟು ಥ್ಯಾಂಕ್ಸ್ ಹೇಳಿದರು. ತಮ್ಮ ದೂರವಾಣಿ ಮರುಸ್ಥಾಪನೆಯಾದ ಕೂಡಲೇ ೬೫ ರೂಪಾಯಿಯನ್ನು ಹಿಂದಿರುಗಿಸುವ ಆರ್ಥಿಕ ಬಲ ಅವರಲ್ಲಿ ಇರ್ಲಿಲ್ಲ

ಎಂಬುದು ಇಂದಿನ ರಾಜಕಾರಣಿಗಳಿಗೆ ಭರ್ಚಿ ಯಂತೆ ಚುಚ್ಚಿದರೂ ಆಶ್ಚರ್ಯ ಇಲ್ಲ. ಒಂದಲ್ಲ ಎರಡಲ್ಲ ಏಳು ವರ್ಷ ಅವರು ಕರ್ನಾಟಕದ ಮುಖ್ಯಮಂತ್ರಿ ಆಗಿದ್ದವರು. ಅಖಿಲ ಭಾರತ ಕಾಂಗ್ರೆಸ್ ಸಮಿತಿಗೆ ಅಧ್ಯಕ್ಷರಾಗಿದ್ದರು. ಈಗ ಇಂಥ ಸನ್ನಿವೇಶ ಸಂದರ್ಭಗಳನ್ನು ಸ್ಮರಿಸಿಕೊಂಡಾಗ ರಾಷ್ಟ್ರ ನಾಯಕ ಎಸ್ ನಿಜಲಿಂಗಪ್ಪನವರು ಎಷ್ಟೊಂದು ಪ್ರಾಮಾಣಿಕರಾಗಿದ್ದರು ಎಂಬುದು ವೇದ್ಯವಾಗುತ್ತದೆ ಅಲ್ವಾ?

Share this post:

Leave a Reply

Your email address will not be published. Required fields are marked *