ಬೆಳಗಾವಿ :–
ಅಭಿವೃದ್ಧಿಯ ಬಗ್ಗೆ ನಿರ್ಲಕ್ಷ್ಯ ತೋರುವ, ಜವಾಬ್ದಾರಿ ಅರಿಯದ ಅಧಿಕಾರಿಗಳಿಗೆ
“ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶವಿಲ್ಲ” ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಖಡಕ್ ಎಚ್ಚರಿಕೆ ನೀಡಿದರು.
ಈಹೊತ್ತು ಮಾತನಾಡಿದ ಅವರು, ಅಭಿವೃದ್ಧಿ ಕೆಲಸ ಮಾಡಲು ಸದಾ ಅಧಿಕಾರಿಗಳಿಗೆ ಸಹಕಾರ ನೀಡುತ್ತೇವೆ.
ಆದರೆ ಪ್ರತಿಯೊಂದು ಕೆಲಸಗಳನ್ನು ಸಿಎಂ ಅಥವಾ ನಾವೇ ಹೇಳಲು ಸಾಧ್ಯವಿಲ್ಲ, ಅಭಿವೃದ್ಧಿಯಲ್ಲಿ ನಿರ್ಲಕ್ಷ್ಯ ಅಥವಾ ಕಾನೂನು ಸುವ್ಯವಸ್ಥೆ ಸರಿಯಾಗಿ ನಿಭಾಯಿಸದಿದ್ದರೆ
ಅಂತಹ ಅಧಿಕಾರಿಗಳಿಗೆ ಜಿಲ್ಲೆಯಲ್ಲಿ ಸೇವೆ ಸಲ್ಲಿಸಲು ಅವಕಾಶವಿಲ್ಲ ಎಂದರು.
ಬೆಳಗಾವಿ ಒಂದು ದೊಡ್ಡ ಜಿಲ್ಲೆಯಾಗಿದ್ದು, ಜಿಲ್ಲಾ ಮಟ್ಟದ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನು ಅರಿತು ಕೆಲಸ ಮಾಡಬೇಕು. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು, ಇಲ್ಲಿನ ಜನರ ಹಿತ ಕಾಪಾಡುವುದು ಮುಖ್ಯ. ಕರ್ತವ್ಯದಲ್ಲಿ ನಿರ್ಲಕ್ಷ್ಯ ವಹಿಸಿದರೆ ಸರ್ಕಾರಕ್ಕೆ, ನಮಗೂ ಕೆಟ್ಟ ಹೆಸರು ಬರುತ್ತದೆ.
ಜಿಲ್ಲೆಯಲ್ಲಿ ಕೆಲವು ಘಟನೆಗಳಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ವಿಫಲವಾಗಿದ್ದರಿಂದ ಪೊಲೀಸ್ ಕಮಿಷನರ್ ಅವರನ್ನು ವರ್ಗಾವಣೆಗೊಳಿಸಲಾಗಿದೆ ಎಂದು ಜಾರಕಿಹೊಳಿ ಸ್ಪಷ್ಟನೆ ನೀಡಿದರು.