ನಿಪ್ಪಾಣಿ :–
ನಗರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡಕ್ಕೆ 3 ಕೋಟಿ ಅನುದಾನ ಬಿಡುಗಡೆಯಾಗಿದ್ದು ಶೀಘ್ರದಲ್ಲಿ ಭೂಮಿ ಪೂಜೆ ನೆರವೇರಿಸಿ ಚಾಲನೆ ನೀಡಲಾಗುವುದು.ಈ ಕಾಲೇಜು ಹೆಚ್ಚುವರಿ ತರಗತಿ ಕೊಠಡಿ,ಪ್ರಯೋಗಾಲಯ,ಮೂಲಭೂತ ಸೌಕರ್ಯ ಹಾಗೂ ಹೈ ಟೆಕ್ ಕಟ್ಟಡ,ನಿರ್ಮಾಣ ವಾಗುವುದು.
ನಿಪ್ಪಾಣಿ ನಗರಸಭೆ ವತಿಯಿಂದ 2 ಎಕರೆ ಜಾಗವನ್ನು ಬಸವೇಶ್ವರ ಪೊಲೀಸ್ ಠಾಣೆ ಎದುರಿಗೆ ಕಾಲೇಜಿಗೆ ಜಾಗ ನೀಡಿದ್ದು ಅಲ್ಲಿ ಹೈ ಟೆಕ್ ಕಾಲೇಜನು ನಿರ್ಮಿಸಿ ವಿದ್ಯಾರ್ಥಿಗಳ ಕಲಿಕೆಗೆ ಅನುಕೂಲ ಮಾಡಿಕೊಡಲಾಗುವುದು.
2020-21ನೇ ಸಾಲಿನಲ್ಲಿ ನಾನು ಸಚಿವೆಯಾದ ಸಂದರ್ಭದಲ್ಲಿ ಉನ್ನತ ಶಿಕ್ಷಣ ಸಚಿವರಾದ ಅಶ್ವತ ನಾರಾಯಣ ಅವರಿಗೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ನಿಪ್ಪಾಣಿಗೆ ಮಂಜೂರು ಮಾಡುವಂತೆ ಮನವಿ ನೀಡಲಾಗಿದ್ದು ನಮ್ಮ ಮನವಿಗೆ ಸ್ಪಂದಿಸಿ ನಮ್ಮ ಬಿಜೆಪಿ ಸರ್ಕಾರವಿದ್ದಾಗ 2020-21 ಸಾಲಿನಲ್ಲಿ ಮಂಜೂರು ಆಗಿದ್ದು
ಸ್ತ್ವಂತ ಕಟ್ಟಡವಿಲ್ಲದ ಕಾರಣ ಮುನ್ಸಿಪಲ್ ಹೈಸ್ಕೂಲ್ ನಲ್ಲಿ ತರಗತಿ ಪ್ರಾರಂಭವಾಗಿರುತ್ತದೆ.ಈಗಿನ ಕಾಂಗ್ರೆಸ್ ಸರಕಾರದಲ್ಲಿ ಹಲವು ಬಾರಿ ಉನ್ನತ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ,ಅಧಿವೇಶನದಲ್ಲಿ ಸಚಿವರ ಗಮನ ಸೆಳೆದು ಧ್ವನಿ ಎತ್ತಿ 3 ಕೋಟಿ ಅನುದಾನ ಮಂಜೂರು ಮಾಡಿಸಿರುತ್ತೇನೆ.
ನಿಪ್ಪಾಣಿಯಲ್ಲಿ ಇಲ್ಲಿಯವರೆಗೆ ಸರ್ಕಾರಿ ಪದವಿ ಕಾಲೇಜು ಇರಲಿಲ್ಲ. ಆದರೆ ಪದವಿ ಕಾಲೇಜು ನಿರ್ಮಾಣಕ್ಕೆ ಅನುದಾನ ಮಂಜೂರು ಮಾಡಿಸಿ,ಈಗ ಅನುದಾನ ಬಿಡುಗಡೆಯಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.