ಚಿಕ್ಕೋಡಿ :–
ಜಾಗತಿಕವಾಗಿ ಪ್ಲಾಸ್ಟಿಕ ಮಾಲಿನ್ಯವನ್ನು ಕೊನೆಗೊಳಿಸುವುದು ಎಂಬ ಘೋಷ ವಾಕ್ಯದೊಂದಿಗೆ ಪ್ಲಾಸ್ಟಿಕ ಮಾಲಿನ್ಯವನ್ನು ಕೊನೆಗೊಳಿಸುವ ಮಹತ್ವವನ್ನು ತಿಳಿಸುವ ಉದ್ದೇಶದೊಂದಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯಗಳು ಅಭಿಯಾನವನ್ನು ಹಮ್ಮಿಕೊಂಡಿದ್ದು
ಪ್ಲಾಸ್ಟಿಕ ತ್ಯಾಜ್ಯದಿಂದ ಆಗುವ ದುಷ್ಪರಿಣಾಮಗಳು ಹಾಗೂ ಇತರ ನಿರ್ಮೂಲನೆ ಮಾಡುವ ಸಂಬಂಧ ವಿವಿಧ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲು ಎಲ್ಲ ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಕಾರ್ಯನಿರ್ವಾಹಕ ಅಧಿಕಾರಿಗಳಾದ ಕೆ.ಎನ್.ವಣ್ಣೂರ ರವರು ಹೇಳಿದರು.
ಗುರುವಾರ ತಾಲೂಕಿನ ಕೇರೂರ ಗ್ರಾಮ ಪಂಚಾಯತಿ ವ್ಯಾಪ್ತಿಯ ಸಯ್ಯದ ಕೋಡಿ ಅಮೃತ ಸರೋವರ ದಡದಲ್ಲಿ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಗೆ ಚಾಲನೆ ನೀಡಿದರು. ಪ್ರತಿಯೊಬ್ಬರೂ ಪರಿಸರ ಸಂರಕ್ಷಿಸಬೇಕು ಗಿಡಮರಗಳನ್ನು ಹೆಚ್ಚು ಬೆಳೆಸುವುದರಿಂದ ಬಿಸಿಲು ಬೇಗೆ ಕಡಿಮೆಯಾಗಿ ಜನರಿಗೆ ಉತ್ತಮ ಆಮ್ಲಜನಕ ದೊರೆಯಲಿದೆ. ಪರಿಸರದ ಸೌಂದರ್ಯ ಹೆಚ್ಚಾಗಲಿದೆ. ಮುಂದಿನ ಪೀಳಿಗೆಗೆ ಪರಿಸರ ಸಂರಕ್ಷಣೆ ಮಾಡುವುದು ಎಲ್ಲರ ಕರ್ತವ್ಯವಾಗಿದೆ. ಮನೆಯ ಸುತ್ತಲೂ ಗಿಡಗಳನ್ನು ಬೆಳೆಸಲು ಹೇಳಿದರು.

ಸಹಾಯಕ ನಿರ್ದೇಶಕರಾದ (ನರೇಗಾ) ಶಿವಾನಂದ ಶಿರಗಾಂವಿ ಅವರು ಮಾತನಾಡಿ
ನಮ್ಮ ಪರಿಸರ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಮಾನವ ಚಟುವಟಿಕೆಗಳಿಂದ ಪರಿಸರಕ್ಕೆ ಆಗುವ ಹಾನಿಯನ್ನು ತಡೆಗಟ್ಟುವುದು ಮತ್ತು ಭೂಮಿಯನ್ನು ರಕ್ಷಿಸುವುದು ಇದರ ಗುರಿಯಾಗಿದೆ. ಜಾಗತಿಕ ತಾಪಮಾನ ಏರಿಕೆಯು ಒಂದು ಗಂಭೀರ ಸಮಸ್ಯೆಯಾಗಿದ್ದು ಅದನ್ನು ತಕ್ಷಣವೇ ಪರಿಹರಿಸಬೇಕಾಗಿದೆ. ಇದು ಪರಿಸರ ಹಾನಿಯ ಕಾರಣಗಳಲ್ಲಿ ಒಂದಾಗಿದೆ.ಆದ್ದರಿಂದ ಜಾಗತಿಕ ತಾಪಮಾನ ಏರಿಕೆಯನ್ನು ತಡೆಗಟ್ಟುವುದು ಮತ್ತು ನಮ್ಮ ಪರಿಸರವನ್ನು ರಕ್ಷಿಸುವುದು ನಮ್ಮ ಕರ್ತವ್ಯವಾಗಿದೆ ಎಂದು ಹೇಳಿದರು,
ಸಹಾಯಕ ನಿರ್ದೇಶಕರಾದ(ಪಂ.ರಾ) ಎಸ್.ಎಸ್.ಮಠದ
ಮಾತನಾಡಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗ್ರಾಮಗಳನ್ನು ಪ್ಲಾಸ್ಟಿಕ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಕ್ರಮ ವಹಿಸುವುದು. ಗ್ರಾಮ ಪಂಚಾಯತಿಗಳಲ್ಲಿ ವಿಶೇಷ ಕಾರ್ಯಕ್ರಗಳನ್ನು ಹಮ್ಮಿಕೊಳ್ಳುವುದು ಮತ್ತು ಪ್ಲಾಸ್ಟಿಕ ಮಾಲಿನ್ಯವನ್ನು ಕೊನೆಗೊಳಿಸುವ ವಿಷಯಗಳ ಕುರಿತು ಎಲ್ಲ ಗ್ರಾಮ ಪಂಚಾಯತಿಗಳಲ್ಲಿ ಜಾಗೃತಿ ಮೂಡಿಸಲು ಪಂಚಾಯತ ಅಭಿವೃದ್ದಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಅಧ್ಯಕ್ಷರಾದ ವಿ.ಆರ್. ಪಾಟೀಲ, ಪಿ.ಡಿ.ಓ ವಿನೋದ ಆಸೋದೆ, ರಂಜೀತ ಕಾರ್ಣಿಕ, ಅಕ್ಷಯ ಠಕ್ಕಪ್ಪಗೋಳ, ಮುತ್ತೆಪ್ಪಾ ಯಾದಗುಡೆ, ಮಂಜುನಾಥ ಧನವಡೆ, ಮಹೇಶ ಪಾಟೀಲ, ಆಶಾರಾಣಿ ಮೋಪಗಾರ, ಆರತಿ ಧನವಡೆ, ಮಹಾಂತೇಶ ಬೆಕ್ಕೇರಿ ಹಾಗೂ ಗ್ರಾಮ ಪಂಚಾಯತ ಸಿಬ್ಬಂಧಿಗಳು ಉಪಸ್ಥಿತರಿದ್ದರು.