ನಿಪ್ಪಾಣಿ :–
“ಹಸಿರೇ ಉಸಿರು…
ಗಿಡ ಬೆಳೆಸಿ ನಾಡು ಉಳಿಸಿ“
ನಗರದ ಶ್ರೀ ಹಾಲಸಿದ್ದನಾಥ ಸಹಕಾರಿ ಸಕ್ಕರೆ ಕಾರ್ಖಾನೆ ನಿಯಮಿತ., (ಮಲ್ಟಿ-ಸ್ಟೇಟ್) ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಶ್ರೀ. ಬಸವಪ್ರಸಾದ ಜೊಲ್ಲೆ ಯವರು ಚಾಲನೆ ನೀಡಿದರು.
ಸಕ್ಕರೆ ಕಾರ್ಖಾನೆ ಆವರಣದಲ್ಲಿ 300 ಕ್ಕಿಂತ ಅಧಿಕ ಸಸಿಗಳನ್ನು ನೆಡಲಾಗುವುದು.
ಪ್ರಕೃತಿಯ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಹೀಗಾಗಿ ಪ್ರಕೃತಿ ಮಾತೆಯ ಮಡಿಲಲ್ಲಿರುವ ನಾವು ಗಿಡಗಳನ್ನು ನೆಟ್ಟು, ಅದನ್ನು ಪೋಷಿಸಬೇಕು. ಪ್ಲಾಸ್ಟಿಕ್ ಬಳಕೆಯನ್ನು ತಡೆಗಟ್ಟಿ, ಪರಿಸರಸ್ನೇಹಿ ವಸ್ತುಗಳನ್ನು ಬಳಸಿ, ಮಾಲಿನ್ಯವನ್ನು ತಡೆಗಟ್ಟೋಣ. ಹಸಿರನ್ನು ಉಸಿರಾಗಿಕೊಂಡು, ಮನುಕುಲದ ಒಳಿತಿಗಾಗಿ ಪರಿಸರ ಸಂರಕ್ಷಿಸೋಣ.
ಈ ಸಂದರ್ಭದಲ್ಲಿ ಸಕ್ಕರೆ ಕಾರ್ಖಾನೆ ಉಪಾಧ್ಯಕ್ಷರು, ನಿರ್ದೇಶಕ ಮಂಡಳಿ ಸದಸ್ಯರು,ಮುಖ್ಯ ಸಿಬ್ಬಂದಿಗಳು ಉಪಸ್ಥಿತರಿದ್ದರು.