ಚಿಕ್ಕೋಡಿ :–
ತಾಲುಕಿನ ಯಕ್ಸಂಬಾ ಪಟ್ಟಣದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಕಾರಹುಣ್ಣಿಮೆ ನಿಮಿತ್ಯವಾಗಿ ರಾಜ್ಯ ಮಟ್ಟದ ಬ್ರಹತ್ ಎತ್ತುಗಳ ಪ್ರದರ್ಶನ ಕಾರ್ಯಕ್ರಮವನ್ನು ನಿಪ್ಪಾಣಿ ಸಮಾಧಿ ಮಠದ ಪ.ಪೂಜ್ಯ.ಶ್ರೀ ಪ್ರಾಣಲಿಂಗ ಸ್ವಾಮೀಜಿ,ಸದಲಗಾ ಗೀತಾಶ್ರಮದ ಪ.ಪೂಜ್ಯ.ಡಾ.ಶೃದ್ದಾನಂದ ಸ್ವಾಮೀಜಿಗಳ ದಿವ್ಯ ಸಾನಿಧ್ಯದಲ್ಲಿ ಆಶಾಜ್ಯೋತಿ ವಿಶೇಷ ಮಕ್ಕಳ ಶಾಲೆಯ ಅಧ್ಯಕ್ಷರಾದ ಶ್ರೀ. ಜ್ಯೋತಿಪ್ರಸಾದ ಜೊಲ್ಲೆ ಹಾಗೂ ಬಸವಜ್ಯೋತಿ ಯೂಥ ಫೌಂಡೇಶನ ಅಧ್ಯಕ್ಷ್ಯರಾದ ಶ್ರೀ. ಬಸವಪ್ರಸಾದ ಜೊಲ್ಲೆ ಯವರು ಉದ್ಘಾಟಿಸಿ, ಎತ್ತುಗಳ ಪ್ರದರ್ಶನವನ್ನು ವೀಕ್ಷಿಸಿ,ಬಳಿಕ ವಿಜೇತರಾದವರಿಗೆ. 75,000/- ಬಹುಮಾನ ವಿತರಿಸಿದರು.

ಗ್ರಾಮೀಣ ಕಲೆ, ಕ್ರೀಡೆಗಳನ್ನು ಆಯೋಜಿಸುವ ಮೂಲಕ ನಮ್ಮ ಗ್ರಾಮೀಣ ಸಂಸ್ಕೃತಿಯ ಸೊಗಡನ್ನು ಪೋಷಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಎತ್ತುಗಳ ಪ್ರದರ್ಶನವನ್ನು ಆಯೋಜಿಸಲಾಗಿದೆ.
ಈ ಸಂದರ್ಭದಲ್ಲಿ ಜೊಲ್ಲೆ ಗ್ರೂಪ್ ಅಂಗ ಸಂಸ್ಥೆಗಳ ಅಧ್ಯಕ್ಷರು, ಉಪಾಧ್ಯಕ್ಷರು, ನಿರ್ದೇಶಕರುಸ್ಥಳೀಯ ಮುಖಂಡರು, ಗಣ್ಯರು, ಉಪಸ್ಥಿತರಿದ್ದರು.