ಬೆಂಗಳೂರು :–
ಬೆಂಗಳೂರು ನಲ್ಲಿರುವ ಚಿನ್ನಸ್ವಾಮಿ ಕ್ರೀಡಾಂಗಣವನ್ನು ಬೇರೆಡೆಗೆ ಸ್ಥಳಾಂತರಿಸುವ ಬಗ್ಗೆ ಗಂಭೀರವಾಗಿ ಪರಿಶೀಲನೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಕ್ರೀಡಾಂಗಣದ ಹೊರಗಡೆ ಆರ್ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತಕ್ಕೆ 11 ಮಂದಿ ಸಾವನ್ನಪ್ಪಿದ ಬಳಿಕ ಸಿಎಂ ಸಿದ್ದರಾಮಯ್ಯ ಅವರಿಂದ ಈ ಹೇಳಿಕೆ ಬಂದಿದೆ. ಕಾಲ್ತುಳಿತದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಬೇರೆಡೆಗೆ ಸ್ಥಳಾಂತರ ಮಾಡಬೇಕು.
ಇಂತಹ ಘಟನೆಗಳು ಯಾವುದೇ ಸರ್ಕಾರದ ಅವಧಿಯಲ್ಲೂ ನಡೆಯಬಾರದು.
“ಇದು ನನಗೆ ನೋವು ತಂದಿದೆ” ಎಂದು ಸಿಎಂ ಹೇಳಿದರು.