ಬೆಂಗಳೂರು :–
ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ಪ್ರತಿ ತಿಂಗಳಲ್ಲಿ ಒಂದು ಶನಿವಾರ ಸಂಭ್ರಮ ಶನಿವಾರ,
ಮಕ್ಕಳನ್ನು ಚಟುವಟಿಕೆಗಳಲ್ಲಿ ಬಹುಮುಖ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆ ಗಳನ್ನಾಗಿ ಬೆಳೆಸಲು, ವಿವಿಧ ಥೀಮ್ಗಳನ್ನು ಆಧರಿಸಿ ವಿದ್ಯಾರ್ಥಿಗಳಿಗೆ 10 ಸ್ವಯಂವಿವರಣಾತ್ಮಕ ಮಾಡ್ಯೂಲ್ ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಯನ್ನು ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ ನೀಡಿದೆ.
ಪ್ರಸ್ತುತ ಸಾಲಿನಲ್ಲಿ ಪ್ರತಿ ತಿಂಗಳು 3 ನೇ ಶನಿವಾರ ಶಾಲಾ ಹಂತದಲ್ಲಿ ಸದರಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲು ತಿಳಿಸಲಾಗಿದ್ದು,
ಮಕ್ಕಳನ್ನು ಬಹುಮುಖ ಚಟುವಟಿಕೆಗಳಲ್ಲಿ ತೊಡಗಿಸುವುದರ ಮೂಲಕ ನಾಗರಿಕ ಪ್ರಜ್ಞೆಯನ್ನು ಬೆಳೆಸಲು ವಿವಿಧ ವಿಷಯಗಳಲ್ಲಿ ವಿದ್ಯಾರ್ಥಿಗಳಿಗಾಗಿ 10 ಸ್ವಯಂ ವಿವರಣಾತ್ಮಕ ಮಾಡ್ಯೂಲ್ ಗಳನ್ನು ಹಾಗೂ ಶಿಕ್ಷಕರಿಗೆ ಮಾರ್ಗದರ್ಶಿ ಕೈಪಿಡಿಗಳನ್ನು ಸಿದ್ಧಪಡಿಸಲಾಗಿದೆ.
ಸಂಭ್ರಮ ಶನಿವಾರ ದಿನದಂದು ಜಿಲ್ಲಾ ಹಂತ ಮತ್ತು ಬ್ಲಾಕ್ ಹಂತದ ಎಲ್ಲಾ ಅಧಿಕಾರಿಗಳು ಹಾಗೂ ಸಿಆರ್ ಪಿಗಳು ಕಡ್ಡಾಯವಾಗಿ ಶಾಲೆಗಳಿಗೆ ಭೇಟಿ ನೀಡಿ ಅನುಪಾಲಿಸುವುದು ಹಾಗೂ ಅಗತ್ಯ ಮಾರ್ಗದರ್ಶನ ನೀಡುವುದು ಕಾರ್ಯಕ್ರಮದ ಯಶಸ್ಸಿಗೆ ಪಾಲ್ಗೊಳ್ಳಬೇಕು ಎಂದು ಸೂಚನೆ ನೀಡಿದೆ.
ರಾಜ್ಯದ ಉರ್ದು ಶಾಲೆಗಳಲ್ಲಿ ಶನಿವಾರ ಪೂರ್ಣ ದಿನವಾಗಿದ್ದು, ಶುಕ್ರವಾರ ಅರ್ಧ ದಿನ ಶಾಲೆ ನಡೆಯುವುದರಿಂದ ಪ್ರತಿ ತಿಂಗಳ 3ನೇ ಶುಕ್ರವಾರ ಬ್ಯಾಗ್ರಹಿತ ದಿನವನ್ನಾಗಿ ಆಚರಿಸಲು ಶಿಕ್ಷಣ ಇಲಾಖೆ ಸೂಚಿಸಿದೆ.