“ಚೌಸನ್ ನರ್ಸರಿ ಶಾಲೆಯಲ್ಲಿ ಪರಿಸರ ಜಾಗೃತಿ ಕಾರ್ಯಗಾರ”

ಚಿಕ್ಕೋಡಿ ಜೂನ್:20 :–

ಪಟ್ಟಣದ ಚೌಸನ್ ನರ್ಸರಿ ಶಾಲೆಯಲ್ಲಿ ಇತ್ತೀಚಿಗೆ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಮಕ್ಕಳಿಗಾಗಿ ಪರಿಸರ ಕುರಿತು ಕಾರ್ಯಗಾರ ಏರ್ಪಡಿಸಲಾಗಿತ್ತು.
ಈ ಕಾರ್ಯಗಾರದಲ್ಲಿ ಭಾಗವಹಿಸಿ ಮಾತನಾಡಿದ ಪ್ರಾಧ್ಯಾಪಕರಾದ ಡಾಕ್ಟರ್ ಎನ್ ಎಸ್ ಶಿಂಧೆ
ಸದೃಢ ಸಮಾಜ ಕಟ್ಟಲು ಸದಾ ಪರಿಸರದ ಜಾಗೃತಿಯ ಕುರಿತು ಮಕ್ಕಳು ಕಾರ್ಯಪ್ರವೃತ್ತರಾಗಬೇಕು ಪರಿಸರ ಕಾಪಾಡುವಲ್ಲಿ ಮಕ್ಕಳ ಪಾತ್ರ ಬಹುಮುಖ್ಯವೆಂದರು.

ರಾಷ್ಟ್ರೀಯ ಶಿಕ್ಷಣ ನೀತಿ 2020 ರ ಪ್ರಕಾರ ಮಕ್ಕಳ ಸಮಗ್ರ ಅಭಿವೃದ್ಧಿಗಾಗಿ ಆರು ಡೊಮೇನ್ ಆರಂಭಕ ಕಲಿಕೆಗೆ ಆದ್ಯತೆ ನೀಡಿ ಕಲಿಸುತ್ತಿರುವುದು ಪ್ರಶಂಸನೀಯ ಎಂದರು
ಇದೇ ಸಂದರ್ಭದಲ್ಲಿ ಪರಿಸರ ಜಾಗೃತಿ ಕಾರ್ಯದಲ್ಲಿ ಮಕ್ಕಳು ವಿವಿಧ ತರಹದ ಎಲೆಗಳಿಂದ ತಮ್ಮಲ್ಲಿರುವ ಕಲಾ ಪ್ರತಿಭೆಯನ್ನು ಪ್ರದರ್ಶಿಸಿದರು.
ಕಾರ್ಯಕ್ರಮದಲ್ಲಿ ಶಿಕ್ಷಕಿಯರಾದ ಕವಿತಾ ಹರಕೆ, ಆಸ್ಮಾ ಜಮಾದಾರ್ ಮತ್ತು ಉಜ್ವಲ ಮಾನೆ ಮುಂತಾದವರು ಉಪಸ್ಥಿತರಿದ್ದರು.

Share this post:

Leave a Reply

Your email address will not be published. Required fields are marked *