“ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ,ಸ್ನಾತಕ ಪದವಿ ಬಿಕಾಂ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಶತ ೯೮% ಫಲಿತಾಂಶ ಸಾಧನೆ”

ಚಿಕ್ಕೋಡಿ :–

ತಾಲುಕಿನ ಜೊಲ್ಲೆ ಶಿಕ್ಷಣ ಸಂಸ್ಥೆಯ ಬಸವಜ್ಯೋತಿ ವಿಜ್ಞಾನ ಮತ್ತು ವಾಣಿಜ್ಯ ಪದವಿ ಮಹಾವಿದ್ಯಾಲಯ, ನಣದಿ.
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ೨೦೨೪-೨೫ನೇ ಸಾಲಿನಲ್ಲಿ ಜರುಗಿದ ಸ್ನಾತಕ ಪದವಿ ಬಿಕಾಂ ಪರೀಕ್ಷೆೆಯ ಫಲಿತಾಂಶ ಪ್ರಕಟವಾಗಿದ್ದು, ನಮ್ಮ ಕಾಲೇಜಿನ ವಿದ್ಯಾರ್ಥಿಗಳು ಪ್ರತಿಶತ ೯೮% ಫಲಿತಾಂಶ ಸಾಧಿಸಿದ್ದು, ವಿದ್ಯಾರ್ಥಿಗಳಾದ

ವೈಷ್ಣವಿ ಅರಗೆ ಪ್ರಥಮ ಸ್ಥಾನ ೯.೮೫
ಸ್ನೇಹಾ ಬಿ ಮತ್ತು ವೈಷ್ಣವಿ ಜೀರಿಗೆ ದ್ವಿತೀಯ ಸ್ಥಾನ ೯.೭೯
ಪ್ರೇಮಾ ಕಬಾಡಿಗೆ ತೃತೀಯ ಸ್ಥಾನ ೯.೭೭
ಅಂಕಗಳನ್ನು ಪಡೆದುಕೊಂಡಿದ್ದಾರೆ.

ಒಟ್ಟು ೧೦೦ ವಿದ್ಯಾರ್ಥಿಗಳಲ್ಲಿ ೮೦ ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ, ೧೪ ವಿದ್ಯಾರ್ಥಿಗಳು ಉನ್ನತ ಶ್ರೇಣಿ, ೪ ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯನ್ನು ಪಡೆದುಕೊಂಡಿದ್ದಾರೆ ಹಾಗೂ ವಿವಿಧ ೪ ವಿಷಯಗಳಲ್ಲಿ ವಿದ್ಯಾರ್ಥಿಗಳು ೧೦೦/೧೦೦ ಅಂಕಗಳನ್ನು ಪಡೆದುಕೊಂಡಿದ್ದಾರೆ.

ಸಾಧನೆಗೈದ ವಿದ್ಯಾರ್ಥಿಗಳಿಗೆ
ಸಂಸ್ಥೆಯ ಸಂಸ್ಥಾಪಕರು ಹಾಗು ಮಾಜಿ ಸಂಸದರಾದ ಅಣ್ಣಾಸಾಹೇಬ ಜೊಲ್ಲೆ , ಸಂಸ್ಥೆಯ ಸಹ ಸಂಸ್ಥಾಪಕರು ಹಾಗೂ ಜನಪ್ರೀಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ, ಆಡಳಿತ ಮಂಡಳಿ, ಪ್ರಾಂಶುಪಾಲರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

Share this post:

Leave a Reply

Your email address will not be published. Required fields are marked *