ಬೆಂಗಳೂರು :–
ಸಿಎಂ ಸಿದ್ದರಾಮಯ್ಯ ಸರ್ಕಾರಕ್ಕೆ ಸಂಕ್ರಾಂತಿಯವರೆಗೆ ಯಾವುದೇ ತೊಂದರೆ ಇಲ್ಲ, ಉಳಿದದ್ದನ್ನು ಸಂಕ್ರಾಂತಿಯ ನಂತರ ನೋಡಿ ಹೇಳಬೇಕು ಎಂದು ಕೋಡಿಮಠದ ಶ್ರೀ ಶಿವಾನಂದ ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಭವಿಷ್ಯ ಹೇಳಿದರು.
ಧಾರವಾಡದಲ್ಲಿ ಮಾತನಾಡಿದ ಅವರು, ಬಯಲು ಸೀಮೆ ಮಲೆನಾಡು ಮಳೆ ಎಂದು ಈ ಹಿಂದೆ ತಾವು ಭವಿಷ್ಯ ನುಡಿದಿದ್ದು, ಅದರಂತೆ ಬಯಲುಸೀಮೆಯಲ್ಲಿ ಮಳೆಯಾಗಿದೆ. ಮಲೆನಾಡು ಬಯಲು ಸೀಮೆ ಆಗುತ್ತೆ ಎಂದು ಹೇಳಿದರು.
ಜಾತಿ ಸಮೀಕ್ಷೆಯ ಬಗ್ಗೆ ಜನರು ತಾವೇ ನಿರ್ಧರಿಸುತ್ತಾರೆ ಎಂದು ಅವರು ತಿಳಿಸಿದರು.





