ಸಾಲುಮರದ ತಿಮ್ಮಕ್ಕ ಶುಕ್ರವಾರ ಕೊನೆಯುಸಿರೆಳೆದಿದ್ದು, ಅವರ ಕೊನೇಯ ಸಂದೇಶ ಈಗ ವೈರಲ್ ಆಗುತ್ತಿದೆ. ಈ ಜಗತ್ತಿನಲ್ಲಿ ಯಾವುದೂ ಶಾಶ್ವತವಲ್ಲ, ಇರುವಷ್ಟು ದಿನ ಯಾರಿಗೂ ತೊಂದರೆ, ಹಿಂಸೆಯಾಗದಂತೆ ಪ್ರೀತಿಯಿಂದ ಬದುಕಿ ಎಂದಿರುವ ಅವರು,
ಎಲ್ಲರನ್ನೂ ಸಮಾನವಾಗಿ ಗೌರವಿಸಿ, ಗಿಡ ನೆಟ್ಟು ಪೋಷಿಸಲು ಕರೆ ನೀಡಿದ್ದಾರೆ.
ದೇಶ ಚೆನ್ನಾಗಿರಲಿ ಬಡವನನ್ನು ಕಂಡು ಬೇಧ-ಭಾವ ಮಾಡಬೇಡಿ. ಮನುಷ್ಯರೆಲ್ಲ ಒಂದೇ,
ಹಸಿದವರಿಗೆ ಅನ್ನ ಕೊಡಿ. ನಾನು ಮಾಡಿದ ಕಾರ್ಯವನ್ನು ಮುಂದುವರಿಸಿ ಎಂದು ಮನವಿ ಮಾಡಿಕೊಂಡಿದ್ದಾರೆ.





