ಬೆಂಗಳೂರು :–
ಮತಗಳ್ಳತನದ ಹಿಂಬಾಗಿಲಿನ ಮೂಲಕ ಫ್ಯಾಸಿಸಂ ಭಾರತವನ್ನು ಪ್ರವೇಶಿಸಲು ಯಾವುದೇ ಕಾರಣಕ್ಕೂ ಬಿಡುವುದಿಲ್ಲ” ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ದೆಹಲಿಯಲ್ಲಿ ಮತಗಳ್ಳತನದ ವಿರುದ್ಧದ ಹೋರಾಟದಲ್ಲಿ ಮಾತನಾಡಿದ ಅವರು,
ಮತದಾನದ ಶಕ್ತಿಯೇ ನಮ್ಮ ಪ್ರಜಾಪ್ರಭುತ್ವದ ಅಡಿಪಾಯ. ಬಿಜೆಪಿ ಸರ್ಕಾರವು ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯ ದುರುಪಯೋಗ ಸೇರಿ ವಿವಿಧ ಮತಗಳ್ಳತನದ ವಿಧಾನಗಳ ಮೂಲಕ ಈ ಪವಿತ್ರ ಶಕ್ತಿಯನ್ನು ಕಸಿಯಲು ಪ್ರಯತ್ನಿಸುತ್ತಿದೆ. ಎಲ್ಲರೂ ಮತಗಳ್ಳತನದ ವಿರುದ್ದ ನಿಲ್ಲೋಣ ಎಂದರು.





