ಬೆಳಗಾವಿ :–
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಮಂಗಳವಾರ ೨೦೨೫ನೇ ಸಾಲಿನ ಕರ್ನಾಟಕ ಬಾಡಿಗೆ (ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ.
ವಿಧಾನಸಭೆಯಲ್ಲಿ ವಿಧೇಯಕ ಮಂಡಿಸಿ ಅನುಮೋದನೆ ಕೋರಿದ ಸಚಿವ ಕೃಷ್ಣಭೈರೇಗೌಡ, ಮೂಲ ವಿಧೇಯಕದಲ್ಲಿ ಉಲ್ಲಂಘನೆಯಾದರೆ ಉಲ್ಲಂಘಿಸಿದವರಿಗೆ ಜೈಲು ಶಿಕ್ಷೆ ವಿಧಿಸಲು ಕಾನೂನಿನಲ್ಲಿ ಅವಕಾಶ ಇತ್ತು.
ಇಂತಹ ಸಣ್ಣಪುಟ್ಟ ತಪ್ಪಿಗೆ ಜೈಲು ಶಿಕ್ಷೆ ಸರಿಯಲ್ಲ ಎಂದು ಅದನ್ನು ತೆಗೆದು, ದಂಡ ಶುಲ್ಕ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ.





