ಬೆಂಗಳೂರು :–
ನೈಋತ್ಯ ರೈಲ್ವೆ ಬೆಂಗಳೂರು ವಿಭಾಗದ ೩೧೭ ಗೂಡ್ ರೈಲು ವ್ಯವಸ್ಥಾಪಕ ಹುದ್ದೆಗಳಿಗೆ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡುವಂತೆ ಕೇಂದ್ರ ರೈಲ್ವೆ ಖಾತೆಯ ರಾಜ್ಯ ಸಚಿವ ವಿ.ಸೋಮಣ್ಣ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಈ ಹಿಂದಿನ ಇಲಾಖೆ ಹೊರಡಿಸಿದ ಅಧಿಸೂಚನೆಯಲ್ಲಿ ಹಿಂದಿ ಮತ್ತು ಇಂಗ್ಲಿಷ್ನಲ್ಲಿ ಪರೀಕ್ಷೆ ನಡೆಯಲು ಅನುಮತಿ ನೀಡಲಾಗಿತ್ತು.
ಅಧಿಸೂಚನೆಯಲ್ಲಿ, ಹುಬ್ಬಳ್ಳಿ ವಿಭಾಗದ ೧೦೧, ಮೈಸೂರು ವಿಭಾಗದ ೫೬ ಹುದ್ದೆಗಳಿಗೆ ಕನ್ನಡದಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗಿತ್ತು.





