ಬೆಳಗಾವಿ :–
ಕೆ.ಎಲ್.ಇ.ಸಂಸ್ಥೆಯ ನೂತನ ಕಾರ್ಯಾಧ್ಯಕ್ಷರಾಗಿ ಆಯ್ಕೆಯಾದ ಶ್ರೀ ಅಮೀತ ಪ್ರಭಾಕರ್ ಕೋರೆ ಅವರನ್ನು ಬೆಳಗಾವಿಯಲ್ಲಿ ಡಿ.ಸಿ.ಸಿ.ಬ್ಯಾಂಕ್ ಅಧ್ಯಕ್ಷರಾದ ಶ್ರೀ ಅಣ್ಣಾಸಾಹೇಬ ಜೊಲ್ಲೆ ಜಿ ಹಾಗೂ ಜೊಲ್ಲೆ ಗ್ರೂಪ್ ಉಪಾಧ್ಯಕ್ಷರಾದ ಶ್ರೀ ಬಸವಪ್ರಸಾದ ಜೊಲ್ಲೆ ಯವರು ಆತ್ಮೀಯವಾಗಿ ಭೇಟಿಯಾಗಿ ಸತ್ಕರಿಸಿ,ಅಭಿನಂದನೆ ಸಲ್ಲಿಸಿದರು.
ನಿಮ್ಮ ಅಧಿಕಾರ ಅವಧಿಯಲ್ಲಿ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರದಲ್ಲಿ ಹೊಸ ಮೈಲುಗಲ್ಲುಗಳನ್ನು ನಿರ್ಮಿಸಿ,ಈ ಹೊಸ ಜವಾಬ್ದಾರಿಯಲ್ಲಿ ಯಶಸ್ಸು ಸಾಧಿಸಿ, KLE Society ದೇಶದಾದ್ಯಂತ ಇನ್ನಷ್ಟು ಕೀರ್ತಿಯನ್ನು ಹೆಚ್ಚಿಸಲಿ ಎಂದು ಶುಭ ಹಾರೈಸಿದರು.





