ಬೆಂಗಳೂರು :–
ಈ ವಾರ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದು, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕರ್ನಾಟಕದ ಮುಂದಿನ ಸಿಎಂ ಆಗಲಿದ್ದಾರೆ ಎಂದು ಮೂಲಗಳನ್ನು ಉಲ್ಲೇಖಿಸಿ ಎನ್ ಡಿ ಟಿ ವಿ ವರದಿ ಮಾಡಿದೆ.
ಸಿದ್ದರಾಮಯ್ಯ ಅವರಿಗೆ ಹೈಕಮಾಂಡ್ ರಾಜ್ಯಸಭಾ ಸ್ಥಾನದ ಆಫರ್ ನೀಡಿದ್ದು, ಪುತ್ರ ಯತೀಂದ್ರಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಪ್ರಸ್ತಾಪ ಮಾಡಿದೆ ಎಂದು ವರದಿ ಹೇಳಿದೆ.
ಆದರೆ ಸಿಎಂ ಸಿದ್ದರಾಮಯ್ಯ ಆಫರ್ಗಳಿಗೆ ಯಾವುದೇ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸದೆ ಕಾಲಾವಕಾಶ ಕೇಳಿದ್ದಾರೆ ಎಂದು ವರದಿ ಹೇಳಿದೆ.





