ಬೆಂಗಳೂರು :
ತಮಿಳುನಾಡು ಮುಖ್ಯಮಂತ್ರಿ ವಿಜಯ್ ನೇತೃತ್ವದ ಸರ್ಕಾರವು ಕನ್ನಡದ ಖ್ಯಾತ ಚಲನಚಿತ್ರ ನಿರ್ಮಾಪಕ ಹಾಗೂ ಕೆವಿಎನ್ ಪ್ರೊಡಕ್ಷನ್ಸ್ ಅಧ್ಯಕ್ಷ ವೆಂಕಟ್ ಕೆ. ನಾರಾಯಣ ಅವರನ್ನು ನವದೆಹಲಿಯಲ್ಲಿ ತಮಿಳುನಾಡು ಸರ್ಕಾರದ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಲಾಗಿದೆ
ಅವರ ಕರ್ತವ್ಯಗಳು ಹಾಗೂ ಅಧಿಕಾರಗಳಿಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪ್ರತ್ಯೇಕವಾಗಿ ಪ್ರಕಟಿಸಲಾಗುವುದು ಎಂದು ಸರ್ಕಾರ ತಿಳಿಸಿದೆ. ಈ ಹುದ್ದೆಗೆ ಕ್ಯಾಬಿನೆಟ್ ದರ್ಜೆಯ ಸ್ಥಾನಮಾನವೂ ಇರುವುದಾಗಿ ವರದಿಯಾಗಿದೆ.





