ಬೆಂಗಳೂರು. :-
ಗ್ರಹಜ್ಯೋತಿ ಯೋಜನೆಯ ಪರಿಷ್ಕರಣೆ ಕುರಿತು ಉಚಿತ ವಿದ್ಯುತ್ ಪಡೆಯಲು ಪಾನ್ ಕಾರ್ಡ್ ಯಾಕೆ ಬೇಕು?
ವಿದ್ಯುತ್ ಸಂಪರ್ಕಕ್ಕೂ ಜಾತಿ ಪ್ರಮಾಣ ಪತ್ರಕ್ಕೂ ಏನು ಸಂಬಂಧ ? ಎಂಬ ವಿರೋಧ ಪಕ್ಷಗಳ ಪ್ರಶ್ನೆ ಕುರಿತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, “ಗೃಹಜ್ಯೋತಿಗೆ ಜಾತಿ ಪ್ರಮಾಣಪತ್ರದ ಅವಶ್ಯಕತೆ ಇಲ್ಲ. ಜಾತಿ ಹೆಸರು ಕಾಲಂನಲ್ಲಿ ಬರೆದರೆ ಸಾಕು. ಫಾರಂ ನೋಡಿದ ಮೇಲೆ ಹೇಳಲಿ, ಅದನ್ನು ತೆಗೆದು ನೋಡಿದ ಮೇಲೆ ಎಲ್ಲರಿಗೂ ಗೊತ್ತಾಗುತ್ತದೆ” ಎಂದು ಹೇಳಿದರು.





