ಬೆಂಗಳೂರು :–
ರಾಜ್ಯದಲ್ಲಿ ವಿದ್ಯುತ್ ಖಾಸಗೀಕರಣಕ್ಕೆ ತೀವ್ರ ವಿರೋಧ ವ್ಯಕ್ತವಾದ ಬೆನ್ನಲ್ಲೇ ತಾನು ಸಲ್ಲಿಸಿದ್ದ ಪ್ರಸ್ತಾವನೆಯನ್ನು ಟಾಟಾ ಕಂಪನಿ ಹಿಂಪಡೆದಿದೆ. ವಿದ್ಯುತ್ ಖಾಸಗೀಕರಣಕ್ಕೆ ರೈತರು, ಎಸ್ಕಾಂ ನೌಕರರು ದೊಡ್ಡ ಮಟ್ಟದಲ್ಲಿ ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆಯಲ್ಲಿ ಕೆಇಆರ್ಸಿ ಆಕ್ಷೇಪಣೆ ವೇಳೆ ಟಾಟಾ ಕಂಪನಿಯು ಪ್ರಸ್ತಾವನೆ ವಾಪಸ್ ಪಡೆದುಕೊಂಡಿದೆ.
ವಿದ್ಯುತ್ ಸರಬರಾಜು ಪರವಾನಿಗೆಗೆ ಸಲ್ಲಿಸಿದ್ದ ಅರ್ಜಿಯನ್ನು ಕಂಪನಿ ವಾಪಸ್ ಪಡೆದ ನಿರ್ಧಾರವನ್ನು ಕರ್ನಾಟಕ ರಾಜ್ಯ ಅನುಮತಿ ಪಡೆದ ವಿದ್ಯುತ್ ಗುತ್ತಿಗೆದಾರರ ಸಂಘ ಸ್ವಾಗತಿಸಿದೆ. ಸಂಘದ ಅಧ್ಯಕ್ಷ ರಮೇಶ್ ?, ಸಿಎಂ ಡಿಕೆ ಶಿವಕುಮಾರ್ ಮತ್ತು ಸಚಿವ ಕೆ. ಜೆ ಜಾರ್ಜ್ ಅವರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.
ಟಾಟಾ ಪವರ್ ಕಂಪನಿ ನಡೆ ವಿರುದ್ಧ 20 ಲಕ್ಷ ಆಕ್ಷೇಪಣಾ ಅರ್ಜಿಗಳು ಸಲ್ಲಿಕೆ ಆಗಿದ್ದವು. ರೈತರು, ಇಲಾಖೆ ನೌಕರರು, ಗುತ್ತಿಗೆದಾರರು ಸಂಘಟಿತ ಹೋರಾಟಕ್ಕೆ ಕೊನೆಗೂ ಫಲ ಸಿಕ್ಕಿದೆ. ಶುಕ್ರವಾರ ಕೆಇಆರ್ ಸಿ ಯಿಂದ ಟಾಟಾ ಪವರ್ ಕಂಪನಿ ಅರ್ಜಿ ವಾಪಸ್ ಪಡೆದಿದೆ .
ಹಳ್ಳಿ, ತಾಲೂಕು, ಜಿಲ್ಲಾ ಮಟ್ಟದಲ್ಲೂ ಭಾರೀ ವಿರೋಧ ವ್ಯಕ್ತ ಮಾಡಿ ಹೋರಾಟ ಆಗಿತ್ತು. ಸ್ವಯಂ ಪ್ರೇರಿತವಾಗಿ ಟಾಟಾ POWER ಪವರ್ ಕಂಪನಿ ಪ್ರಸ್ತಾವನೆ ಹಿಂಪಡೆದಿರುವುದು ಎಂದವರು ಹೇಳಿದ್ದಾರೆ. ಸ್ವಾಗತಾರ್ಹ
ಆತಂಕ ಬೇಡ ಎಂದಿದ್ದ ಸಚಿವ ಕೆ.ಜೆ. ಜಾರ್ಜ್
ವಿದ್ಯುತ್ ಖಾಸಗೀಕರಣ ವಿಚಾರ ಸಂಬಂಧ 3 ದಿನಗಳ ಹಿಂದಷ್ಟೇ ಪ್ರತಿಕ್ರಿಯಿಸಿದ್ದ ಇಂಧನ ಸಚಿವ ಕೆ.ಜೆ. ಜಾರ್ಜ್, ಈ ವಿಚಾರದಲ್ಲಿ ಆತಂಕ ಬೇಡ ಎಂದಿದ್ದರು. 2003ರಲ್ಲಿ ಬಿಜೆಪಿ ಅಧಿಕಾರ ಇದ್ದಾಗ ಖಾಸಗೀಕರಣಕ್ಕೆ ತಿದ್ದುಪಡಿ ತಂದರು. ಆದ್ರೆ ಇಷ್ಟರೊಳಗೆ ಕರ್ನಾಟಕದಲ್ಲಿ ಅದು ಆಗಿಲ್ಲ. ಈಗ ಮತ್ತೆ ವಿದ್ಯುತ್ ಖಾಸಗೀಕರಣಕ್ಕೆ ಕೆಇಆರ್ಸಿಗೆ ಪ್ರಸ್ತಾವನೆ ಸಲ್ಲಿಸಿದಾರೆ. ಈ ಸಂಬಂಧ ಆಕ್ಷೇಪಣೆ ಸಲ್ಲಿಕೆಗೆ ನಮ್ಮ ನಿಗಮಗಳಿಗೆ ಹೇಳಿದ್ದೇವೆ. ಫೈನಲ್ ಆರ್ಡರ್ ಬಂದ ಮೇಲೆ ನಾವು ಏನ್ ಮಾಡಬೇಕು ಯೋಚಿಸುತ್ತೇವೆ ಎಂದು ಹೇಳಿದ್ದರು. ಈ ನಡುವೆಯೇ ಈಗ ಟಾಟಾ ಪವರ್ ಕಂಪನಿ ತನ್ನ ಪ್ರಸ್ತಾವನೆಯನ್ನೇ ಹಿಂಪಡೆದಿದೆ.





