ಬೆಂಗಳೂರು :–
ಕೆಂಪೇಗೌಡ ಜಯಂತಿ ವೇಳೆ ನಡೆದ ಗಲಾಟೆಯ ನಂತರ ಕಾಂಗ್ರೆಸ್ ಪಕ್ಷದ ಶಾಸಕ ಪ್ರದೀಪ್ ಈಶ್ವರ್ ಅವರಿಗೆ ಜೀವಭಯದ ಆತಂಕ ಎದುರಾಗಿರುವ ಕಾರಣ,
ಹೆಚ್ಚಿನ ಪೊಲೀಸ್ ಭದ್ರತೆ ಒದಗಿಸುವ ಅಗತ್ಯವಿದೆ ಎಂದು ರಾಜ್ಯ ಗುಪ್ತಚರ ಇಲಾಖೆ ಗೃಹ ಇಲಾಖೆಗೆ ಸಲಹೆ ನೀಡಿದ್ದಾಗಿ ವರದಿಗಳಾಗಿವೆ. ಕೆಂಪೇಗೌಡ ಜಯಂತಿ ವೇಳೆ ಪ್ರದೀಪ್ ಈಶ್ವರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿ,
ಅವರ ಮೇಲೆ ಚಪ್ಪಲಿ ಎಸೆಯಲಾಗಿತ್ತು. ಜೀವಭಯದ ಕುರಿತು ಗೃಹ ಇಲಾಖೆ ಇನ್ನೂ ಅಧಿಕೃತ ಮಾಹಿತಿ ಪ್ರಕಟಿಸಿಲ್ಲ.





