“ಕರ್ನಾಟಕ ರಾಜ್ಯದ ಶಾಶ್ವತ ವಸತಿ ಪ್ರಮಾಣ ಪತ್ರಕ್ಕೆ ಆಕ್ಷೇಪ,ತುರ್ತು ಪರಿಶೀಲನೆಗಾಗಿ ಕೇಂದ್ರ ಗೃಹ ಸಚಿವರಿಗೆ” : ಶೋಭಾ ಕರಂದ್ಲಾಜೆ ಪತ್ರ

ಬೆಂಗಳೂರು :–

ಕರ್ನಾಟಕ ರಾಜ್ಯದ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿರುವ ‘ಕರ್ನಾಟಕ ಶಾಶ್ವತ ವಸತಿ ಪ್ರಮಾಣಪತ್ರ (PRC) – ೨೦೨೬’ ನಿಯಮಾವಳಿಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕರ್ನಾಟಕ ಸರ್ಕಾರವು ಯಾವುದೇ ಸಾಂವಿಧಾನಿಕ ಅಧಿಕಾರವಿಲ್ಲದೆ ‘ಶಾಶ್ವತ ನಿವಾಸಿಗಳು’ ಎಂಬ ಪ್ರತ್ಯೇಕ ವರ್ಗವನ್ನು ಸೃಷ್ಟಿಸಲು ಹೊರಟಿರುವುದು ಕಾನೂನು ಬಾಹಿರವಾಗಿದೆ ಎಂದು ಅವರು ಹೇಳಿದ್ದಾರೆ.

ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು, ತಕ್ಷಣವೇ ಮಧ್ಯಪ್ರವೇಶಿಸುವಂತೆ ಮನವಿ ಮಾಡಿದ್ದಾರೆ.

Share this post:

Leave a Reply

Your email address will not be published. Required fields are marked *

You cannot copy content of this page