ಬೆಂಗಳೂರು :–
ಬಿಡದಿ ಟೌನ್ಶಿಪ್ ಬಗ್ಗೆ ಸಚಿವ ಮಧು ಬಂಗಾರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿವಮೊಗ್ಗದ ಶಿಕಾರಿಪುರದಲ್ಲಿ ಮೆಲು ಧ್ವನಿಯಲ್ಲಿ ಮಾತನಾಡಿಕೊಳ್ಳುತ್ತಿದ್ದ ವಿಡಿಯೋವನ್ನು ಕಾಂಗ್ರೆಸ್ ಪಕ್ಷ ಹಂಚಿಕೊಂಡಿದೆ.
ಇಂದು ಪಾದಯಾತ್ರೆ ಏನೋ ಇಟ್ಟುಕೊಂಡಿದ್ದೀರಿ. ಮಾಡುತ್ತಿಲ್ಲವಾ ? ಎಂದು ಮಧು ಬಂಗಾರಪ್ಪ ಪ್ರಶ್ನಿಸಿದ್ದಾರೆ. ಅದಕ್ಕೆ ವಿಜಯೇಂದ್ರ, ಮಾಡುತ್ತಾ ಇದ್ದಾರೆ,
ಅದು ಸಿಂಬಾಲಿಕ್ ಮಾತ್ರ. ಯಾರ್ಯಾರು ಹೋರಾಟಕ್ಕೆ ಬಂದಿದ್ದಾರೋ ಅವರೆಲ್ಲ ಪರಿಹಾರ ಪಡೆಯುತ್ತಿದ್ದಾರೆ ಎಂದರು.





