“ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಬೆಳಗಾವಿ ಇದರ ವತಿಯಿಂದ ವಿಧಾನಸಭೆಗೆ ಆಯ್ಕೆಯಾದ ಶಾಸಕ ಹಾಗೂ ಸಚಿವರಿಗೆ ಗೌರವ ಸನ್ಮಾನ ಕಾರ್ಯಕ್ರಮದ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಬೆಳಗಾವಿ :–

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕ ಬೆಳಗಾವಿ ಇದರ ವತಿಯಿಂದ ವಿಧಾನಸಭೆಗೆ ಆಯ್ಕೆಯಾದ ಶಾಸಕ ಹಾಗೂ ಸಚಿವರಿಗೆ ಗೌರವ ಸನ್ಮಾನ ಕಾರ್ಯಕ್ರಮದಲ್ಲಿ, ಕಾರಂಜಿ ಮಠದ ಶ್ರೀ ಮ.ನಿ.ಪ್ರ. ಪೂಜ್ಯನೀಯ ಗುರುಸಿದ್ಧ ಮಹಾಸ್ವಾಮಿಜಿಗಳು ಹಾಗೂ ನಿಡಸೋಸಿಯ ದುರದುಂಡೀಶ್ವರ ಉತ್ತರಾಧಿಕಾರಿಗಳಾದ ಪ.ಪೂ
ಶ್ರೀ ನಿಜಲಿಂಗೇಶ್ವರ ಮಹಾಸ್ವಾಮಿಗಳ ದಿವ್ಯ ಸಾನಿಧ್ಯದಲ್ಲಿ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಭಾಗವಹಿಸಿ, ಸತ್ಕಾರ ಸ್ವೀಕರಿಸಿ, ಮಾತನಾಡಿದರು. ವೀರಶೈವ ಲಿಂಗಾಯತ ವಿದ್ಯಾರ್ಥಿನಿಯರಿಗೆ ಉಚಿತ ವಸತಿ ಗೃಹ ನಿರ್ಮಿಸುತ್ತಿದ್ದು ನಮ್ಮ ಜೊಲ್ಲೆ ಗ್ರೂಪ್ ವತಿಯಿಂದ ಕೂಡ ಸಹಾಯ ಮಾಡಲಾಗುವುದು.

ಈ ಸಂದರ್ಭದಲ್ಲಿ ರಾಜ್ಯಸಭಾ ಮಾಜಿ ಸದಸ್ಯರು ಹಾಗೂ ಕೆ.ಎಲ್.ಇ ಸಂಸ್ಥೆಯ ಕಾರ್ಯಾಧ್ಯಕ್ಷರಾದ ಶ್ರೀ ಪ್ರಭಾಕರ್ ಕೋರೆ ಜಿ, ರಾಜ್ಯಸಭಾ ಸದಸ್ಯರಾದ ಶ್ರೀ ಈರಣ್ಣ ಕಡಾಡಿ,ಸಂಸದರಾದ ಶ್ರೀಮತಿ ಮಂಗಲಾ ಅಂಗಡಿ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಹನುಮಂತ ನಿರಾಣಿ, ಶಾಸಕರಾದ ಶ್ರೀ ಲಕ್ಷ್ಮಣ ಸವದಿ,ಶ್ರೀ ಮಹಾಂತೇಶ ಕೌಜಲಗಿ, ಶ್ರೀ ನಿಖಿಲ ಕತ್ತಿ, ಶ್ರೀ ಬಾಬಾಸಾಹೇಬ ಪಾಟೀಲ, ನಿವೃತ್ತ ಪ್ರಾದೇಶಿಕ ಆಯುಕ್ತರಾದ ಶ್ರೀ ಎಮ್.ಜಿ. ಹಿರೇಮಠ, ಲಿಂಗಾಯತ ಮಹಾಸಭಾದ ಬೆಳಗಾವಿ ಜಿಲ್ಲಾ ಘಟಕದ ಅಧ್ಯಕ್ಷರಾದ ಶ್ರೀಮತಿ ರತ್ನಾಪ್ರಭಾ ಬೆಲ್ಲದ ಹಾಗೂ ಮತ್ತಿತರರ ಗಣ್ಯರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours