ರಾಜ್ಯದಲ್ಲಿ ಎರಡನೆ ಅತೀ ಹೆಚ್ಚು ಅಂತರದ ಗೆಲುವು ಪಡೆದ ಗಣೇಶ ಹುಕ್ಕೇರಿ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಕಳೆದ ಎರಡು ಅವಧಿಯಲ್ಲಿ ಚಿಕ್ಕೋಡಿ ಸದಲಗಾ ಕ್ಷೇತ್ರದಲ್ಲಿ ಮಾಡಿರುವ ಅಭಿವೃದ್ಧಿ ಕಾರ್ಯಗಳು. ತಂದೆ ಪ್ರಕಾಶ ಹುಕ್ಕೇರಿ ಮೇಲೆ ಜನರು ಇಟ್ಟಿರುವ ನಂಬಿಕೆ.ಪ್ರೀತಿ ವಾತ್ಸಲ್ಯದಿಂದ ಈ ಚುನಾವಣೆಯಲ್ಲಿ 78509 ಅತೀ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಲು ಸಾಧ್ಯವಾಗಿದೆ.

ಚಿಕ್ಕೋಡಿ ಸದಲಗಾ ಕ್ಷೇತ್ರದ ಜನರ ಸೇವಕನಾಗಿ ಕ್ಷೇತ್ರದ ಅಭಿವೃದ್ಧಿಗೆ ಸದಾ ದುಡಿಯುತ್ತೇನೆ. ಕ್ಷೇತ್ರದ ಜನರು ದಾಖಲೆ ಮತದಾನದಿಂದ ಗೆಲ್ಲಿಸಲು ಸಹಕಾರ ಮಾಡಿದ ಕ್ಷೇತ್ರದ ಪ್ರತಿಯೊಬ್ಬರಿಗೂ ಕೃತಜ್ಞತೆ ಸಲ್ಲಿಸಲಾಗುತ್ತದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗಣೇಶ ಹುಕ್ಕೇರಿ ಹೇಳಿದರು.
ಪತ್ರಿಕಾ ಪ್ರಕಟಣೆ ನೀಡಿದ ಅವರು.

ಕಳೆದ ಎರಡು ಚುನಾವಣೆಯಲ್ಲಿ ಆಯ್ಕೆ ಮಾಡಿದ ನನಗೆ ಈ ಚುನಾವಣೆಯಲ್ಲಿ ಭಾರಿ ಅಂತರದ ಗೆಲ್ಲಲು ಪಕ್ಷದ ಕಾರ್ಯಕರ್ತರು ಶಕ್ತಿ ಮೀರಿ ಕೆಲಸ ಮಾಡಿದ್ದಾರೆ. ಜನರು ಇಟ್ಟಿರುವ ನಂಬಿಕೆ ಹುಸಿ ಮಾಡದೇ ಕ್ಷೇತ್ರದ ಸಮಸ್ಯೆ ಬಗೆಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಮತದಾನ ಮಾಡಿದ ಪ್ರತಿಯೊಬ್ಬ ಕಾರ್ಯಕರ್ತರಿಗೆ ಧನ್ಯವಾದಗಳು ಹೇಳುತ್ತೇನೆ. ಈ ಫಲಿತಾಂಶ ಸಂತಸ ಮೂಡಿಸಿದೆ ಎಂದು ಗಣೇಶ ಹುಕ್ಕೇರಿ ತಿಳಿಸಿದರು.


Share with Your friends

You May Also Like

More From Author

+ There are no comments

Add yours