“ನರೇಗಾ ಯೋಜನೆಯ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಳ್ಳಲಾಗಿದೆ” – ನಿಂಗಪ್ಪ ಮಸಳಿ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಅಮೃತ ಅಭಿಯಾನದಡಿ ಆರೋಗ್ಯ ಇಲಾಖೆ ಕೆ.ಎಚ್.ಪಿ.ಟಿ ತಾಲೂಕ ಮತ್ತು ಗ್ರಾಮ ಪಂಚಾಯತ ಸಹಯೋಗದಲ್ಲಿ ಮಹಾತ್ಮ ಗಾ಼ಂಧಿ ನರೇಗಾ ಯೋಜನೆಯ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರವನ್ನು ತಾಲೂಕಿನ ಎಲ್ಲಾ ಗ್ರಾಮ ಪಂಚಾಯತಿಗಳಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕ ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ನಿಂಗಪ್ಪ ಮಸಳಿ ಹೇಳಿದರು.

ಗುರುವಾರದಂದು ತಾಲುಕಿನ ಕೇರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆಯ ಕೂಲಿಕಾರ್ಮಿಕರ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದರು. ಎಲ್ಲಾ ಕಾರ್ಮಿಕರು ಬಿಪಿ,ಶುಗರ,ರಕ್ತ ಹೀನತೆ ಇನ್ನಿತರ ಆರೋಗ್ಯ ತಪಾಸಣೆ ಮಾಡಿಕೊಂಡು ಆರೋಗ್ಯದ ಬಗ್ಗೆ ಕಾಳಜಿ ವಹಿಸಿ ಸದೃಡವಾಗಬೇಕೆಂದು ಹೇಳಿದರು.

ಸಹಾಯಕ ನಿರ್ದೇಶಕರಾದ ಶಿವಾನಂದ ಶಿರಗಾಂವಿ ಮಾತನಾಡಿ ಉಚಿತ ಆರೋಗ್ಯ ಶಿಬಿರದಲ್ಲಿ ಹೆಚ್ಚು ಕೂಲಿಕಾರ್ಮಿಕರು ಭಾಗವಹಿಸಿ ಆರೋಗ್ಯ ತಪಾಸಣೆ ಮಾಡಿಕೊಳ್ಳಬೇಕು ಪ್ರತಿ ಕುಟುಂಬಕ್ಕೆ ೧೦೦ ದಿನ ಕೆಲಸ ನೀಡಲಾಗುವದು ಪ್ರತಿ ದಿನಕ್ಕೆ ೩೧೬ ರೂ ಕೂಲಿ ಮೊತ್ತವನ್ನು ಕೊಡಲಾಗುವದು ಹಾಗೂ ವೈಯಕ್ತಿಕ ಕಾಮಗಾರಿಗಳಾದ ಕೃಷಿಹೊಂಡ, ದನದ ಶೆಡ್,ಕುರಿ,ಮೇಕೆ ಸಾಕಾಣ ಕೆಗಾಗಿ ಶೆಡ್‌ಗಳನ್ನು ನಿರ್ಮಾಣ ಮಾಡಿಕೊಳ್ಳಲು ಅವಕಾಶವಿದೆ ಎಂದು ಹೇಳಿದರು..
ಗ್ರಾಮ ಪಂಚಾಯತ ವತಿಯಿಂದ ಆರೋಗ್ಯ ತಪಾಸಣೆ ಜೊತೆಗೆ ಕೂಲಿಕಾರ್ಮಿಕರಿಗೆ ಊಟದ ವ್ಯವಸ್ಥೆಯನ್ನು ಮಾಡಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ ಪಿ.ಡಿ.ಓ ಸಂತಪ್ಪ ಕಟ್ಟಿಮನಿ, ಐ.ಇ.ಸಿ ಸಂಯೋಜಕರಾದ ರಂಜೀತ ಕಾಂಬಳೆ, ಆಡಳಿತ ಸಹಾಯಕ ಅಕ್ಷಯ ಠಕ್ಕಪ್ಪಗೋಳ, ನರೇಗಾ ವಿಷಯ ನಿರ್ವಾಹಕರಾದ ಕೆ.ಎಸ್.ಮಹೇಶಕುಮಾರ, ತಾಂತ್ರಿಕ ಸಿಬ್ಬಂದಿ ಉದಯ ಒಡೆಯರ, ಬಿ.ಎಪ್.ಟಿ ಮುತ್ತು ಯಾದಗುಡೆ, ಮಂಜುನಾಥ ಧನವಾಡೆ, ಗ್ರಾಮ ಪಂಚಾಯತ ಸಿಬ್ಬಂದಿಗಳು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours