“ಪ್ರ ಮ,ಮೋದಿಜಿ ನೇತೃತ್ವದಲ್ಲಿ ನಮ್ಮ ದೇಶ ಪ್ರಗತಿಯ ಪಥದತ್ತ ಸಾಗುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ” – ಅಣ್ಣಾಸಾಹೇಬ ಜೊಲ್ಲೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಲೋಕಸಭಾ ವ್ಯಾಪ್ತಿಯ ಅಥಣಿ ಮತಕ್ಷೇತ್ರದ ಕಕಮರಿ ಗ್ರಾಮದಲ್ಲಿ ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ನಮ್ಮ ಕೇಂದ್ರ ಸರ್ಕಾರ ಯಶಸ್ವಿ 9 ವರ್ಷ ಪೂರೈಸಿದ ಹಿನ್ನೆಲೆ, ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಮಹಾ ಜನಸಂಪರ್ಕ ಅಭಿಯಾನ ಸಭೆ ನಡೆಸಿ, ನಮ್ಮ ಕೇಂದ್ರ ಸರ್ಕಾರದ ಸಾಧನೆಗಳನ್ನು ತಿಳಿಸಿದರು.

ಇದೇ ವೇಳೆ ನಮ್ಮ ಸರ್ಕಾರದ ಸಾಧನೆಗಳ ಕುರಿತ ವಿಡಿಯೋವನ್ನು ವೀಕ್ಷಿಸಿದರು. ಜನರ ಸಂಪರ್ಕದಿಂದ ಜನರ ಸಮರ್ಥನೆ ಅಭಿಯಾನದಲ್ಲಿ ಪಾಲ್ಗೊಳ್ಳಲು 9090902024 ಮಿಸ್ ಕಾಲ್ ನೀಡಿ ಎಂದು ಕರೆ ನೀಡಿದರು. ಮೋದಿಜಿ ನೇತೃತ್ವದಲ್ಲಿ ನಮ್ಮ ದೇಶ ಪ್ರಗತಿಯ ಪಥದತ್ತ ಸಾಗುತ್ತಿರುವುದು ನಮ್ಮೆಲ್ಲರಿಗೂ ಹೆಮ್ಮೆಯ ಸಂಗತಿ.

ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಶ್ರೀ ಮಹೇಶ ಕುಮಠಳ್ಳಿ, ಚಿಕ್ಕೋಡಿ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜೇಶ ನೇರ್ಲಿ,ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷರಾದ ಶ್ರೀ ದುಂಡಪ್ಪ ಭೆಂಡವಾಡೆ, ಅಥಣಿ ಮಂಡಲ ಅಧ್ಯಕ್ಷರಾದ ಶ್ರೀ ರವಿ ಸಂಕ, ಸ್ಥಳೀಯ ಮುಖಂಡರು, ಹಾಗೂ ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours