“ತವಂದಿ ಘಾಟ್ ಹತ್ತಿರ ಅಪಘಾತ ಹೆಚ್ಚು ಆಗುತ್ತಿರುವ ಕಾರಣ ಅಲ್ಲಿ ಬ್ರಿಡ್ಜ್ ನಿರ್ಮಿಸಿ ವ್ಯವಸ್ಥಿತವಾಗಿ ಮಾಡುವಂತೆ ಸಲಹೆ” ಶಾಸಕಿ ಸೌ.ಶಶಿಕಲಾ ಜೊಲ್ಲೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ನಗರಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಸಭೆ ನಡೆಸಿದರು.

ಬೆಳಗಾವಿಯಿಂದ ಸಂಕೇಶ್ವರ – ನಿಪ್ಪಾಣಿ ಮೂಲಕ ಮಹಾರಾಷ್ಟ್ರ ಗಡಿಯವರೆಗೆ 3972 ಕೋಟಿ ರೂ. ಮೊತ್ತದಲ್ಲಿ 6 ಲೈನ್ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಪ್ರಗತಿಯಲ್ಲಿದ್ದು, ಕಾಮಗಾರಿಯ ನೀಲನಕ್ಷೆ ವೀಕ್ಷಿಸಿದರು.

ನಿಪ್ಪಾಣಿ ಮತಕ್ಷೇತ್ರದ ತವಂದಿ ಘಾಟ್ ಹತ್ತಿರ ಅಪಘಾತ ಹೆಚ್ಚು ಆಗುತ್ತಿರುವ ಕಾರಣ ಅಲ್ಲಿ ಬ್ರಿಡ್ಜ್ ನಿರ್ಮಿಸಿ ವ್ಯವಸ್ಥಿತವಾಗಿ ಮಾಡುವಂತೆ ಸಲಹೆ ಕೊಡಲಾಯಿತು. ಮಾಂಗುರ ಕ್ರಾಸ್ ಮತ್ತು ಸೌಂದಲಗಾ ಕ್ರಾಸ್ ಹತ್ತಿರ ಓವರ್ ಬ್ರಿಡ್ಜ್ ಮಾಡುತ್ತಿದ್ದು, ಮಳೆಗಾಲದಲ್ಲಿ ಮಹಾಪೂರ ಬಂದಾಗ ಮುಂದೆ ನೀರು ಹರಿದು ಹೋಗುವಂತೆ ವ್ಯವಸ್ಥೆ ಕಲ್ಪಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇದೇ ರೀತಿ ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯ ಕಣಗಲಾ ಗ್ರಾಮದ ಬೈರಾಪುರ ಕುಂಬಾರ ಸರ್ಕಲ್ ಹತ್ತಿರ ಕೆಳ ಸೇತುವೆ ನಿರ್ಮಾಣ (ಅಂಡರ್ ಬ್ರಿಡ್ಜ್) ನಿರ್ಮಾಣ ಮಾಡಬೇಕು.

ಈ ಸಂದರ್ಭದಲ್ಲಿ ಯೋಜನಾ ನಿರ್ದೇಶಕರಾದ ಭುವನೇಶ ಕುಮಾರ, ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳು ಅಜೀತ ಬೋಗಾರ, ಗುತ್ತಿಗೆದಾರರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours