“ಭಾರತದ ಚಂದ್ರಯಾನ-3 ಯಶಸ್ವಿ ಹಿನ್ನೆಲೆ ಅನ್ನಾಸಾಹೇಬ್ ಜೊಲ್ಲೆ ಸಂಸದರ ಕಚೇರಿ ಎದುರು ಪಟಾಕಿ ಸಿಡಿಸಿ,ಸಿಹಿ ಹಂಚಿ ಸಂಭ್ರಮಾಚರಣೆ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ಚಿಕ್ಕೋಡಿ :–

ಭಾರತದ ಚಂದ್ರಯಾನ-3 ಯಶಸ್ವಿ ಹಿನ್ನೆಲೆ ಪಟ್ಟಣದ ನಗರದ ಇಂದಿರಾ ನಗರ ಕ್ರಾಸ್ ಬಳಿ ಶ್ರೀ ಅನ್ನಾಸಾಹೇಬ್ ಜೊಲ್ಲೆ ಸಂಸದರ ಕಚೇರಿ ಎದುರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಾಚರಣೆ ಮಾಡಿದರು.

ಚಂದ್ರನ ಮೇಲೆ ವಿಕ್ರಂ ಲ್ಯಾಂಡರ್ ಸೇಫ್ ಲ್ಯಾಂಡಿಗ್ ಆಗುತ್ತಿದ್ದಂತೆ ಸಂಭ್ರಮ ಮುಗಿಲು ಮುಟ್ಟಿತ್ತು.ರಾಷ್ಟ್ರಧ್ವಜ ಹಿಡಿದು ಸಂಭ್ರಮಾಚರಣೆ ಮಾಡಿದ ಬಿಜೆಪಿ ಕಾರ್ಯಕರ್ತರು ಸಂತಸ ವ್ಯಕ್ತಪಡಿಸಿದರು.
ಪ್ರಧಾನಿ ನರೇಂದ್ರ ಮೋದಿ ಹಾಗೂ ಇಸ್ರೋ ವಿಜ್ಞಾನಿಗಳ ತಂಡಕ್ಕೆ ಅಭಿನಂದನೆ ಸಲ್ಲಿಸಿದ ಕಾರ್ಯಕರ್ತರು ಇಡೀ ವಿಶ್ವಕ್ಕೆ ಭಾರತ ಗುರುವಾಗಿದೆ ಎಂದು ಸಂಭ್ರಮಾಚರಣೆ ಮಾಡಿದರು.
ಈ ಸಂದರ್ಭದಲ್ಲಿ ಪುರಸಭೆ ಮಾಜಿ ಉಪಾಧ್ಯಕ್ಷ ಸಂಜಯ ಕವಟಗಿಮಠ. ರೈತ ಮೋರ್ಚಾ ರಾಜ್ಯ ಉಪಾಧ್ಯಕ್ಷ ದುಂಡಪ್ಪ ಬೆಂಡವಾಡೆ. ಬಿಜೆಪಿ ಜಿಲ್ಲಾಧ್ಯಕ್ಷ ಡಾ.ರಾಜೇಶ ನೇರ್ಲಿ.‌ಸಿದ್ದಪ್ಪ ಡಂಗೇರ. ರಮೇಶ ಕಾಳನ್ನವರ. ನ್ಯಾಯವಾದಿ ರಾಜು ಖೋತ. ಸತೀಶ ಅಪ್ಪಾಜಿಗೋಳ. ಶಕುಂತಲಾ ಡೋಣವಾಡೆ. ಸಂಸದರ ಆಪ್ತ ಸಹಾಯಕ ಆನಂದ ಕೊಟಬಾಗಿ ಸೇರಿದಂತೆ ಮುಂತಾದವರು ಇದ್ದರು.


Share with Your friends

You May Also Like

More From Author

+ There are no comments

Add yours