“ಈ ಭಾರಿಯ ಲೋಕಸಭೆ ಚುನಾವಣೆಯಲ್ಲೂ ಚಿಕ್ಕೋಡಿ- ಸದಲಗಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತಗಳು ಬೀಳಲಿವೆ”- ಪ್ರಕಾಶ ಹುಕ್ಕೇರಿ

Estimated read time 1 min read
Share with Your friends

ಚಿಕ್ಕೋಡಿ :
ಈ ಹಿಂದಿನ ಮೂರು ಲೋಕಸಭೆಯ ಚುನಾವಣೆಯಲ್ಲಿ ಚಿಕ್ಕೋಡಿ-ಸದಲಗಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಹೆಚ್ಚಿನ ಮತಗಳು ಬಂದಿವೆ. ಈ ಭಾರಿಯ ಲೋಕಸಭೆ ಚುನಾವಣೆಯಲ್ಲೂ ಚಿಕ್ಕೋಡಿ- ಸದಲಗಾ ಮತಕ್ಷೇತ್ರದಿಂದ ಕಾಂಗ್ರೆಸ್ ಪಕ್ಷಕ್ಕೆ ಅತ್ಯಧಿಕ ಮತಗಳು ಬೀಳಲಿವೆ ಎಂದು ದೆಹಲಿಯ ವಿಶೇಷ

ಪ್ರತಿನಿಧಿ ಹಾಗೂ ವಿ.ಪ.ಸದಸ್ಯ ಪ್ರಕಾಶ ಹುಕ್ಕೇರಿ ವಿಶ್ವಾಸ ವ್ಯಕ್ತಪಡಿಸಿದರು.

ರವಿವಾರ ತಾಲುಕಿನ ಯಕ್ಸಂಬಾ ಪಟ್ಟಣದಲ್ಲಿರುವ ಅಣ್ಣಪೂರ್ಣೇಶ್ವರಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ಚಿಕ್ಕೋಡಿ ಲೋಕಸಭೆ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಯವರ ಪ್ರಚಾರ ಸಭೆ ಉದ್ಘಾಟಿಸಿ ಮಾತನಾಡಿದ ಅವರು,ಕಳೆದ 2009 ರಿಂದ ಇಲ್ಲಿಯವರಿಗೆ ಮುನ್ನಡೆಯಾಗಿದೆ. ಚುನಾವಣೆಯಲ್ಲಿ ಚಿಕ್ಕೋಡಿಯಿಂದ ಹೆಚ್ಚಿನ ಮತ ಕಾಂಗ್ರೆಸ್ ಪರವಾಗಿ ಹೋಗಲಿದೆ. ಒಳಗೊಂದು ಹೊರಗೊಂದು ಪ್ರಕಾಶ ಹುಕ್ಕೇರಿ ಮಾಡಿಲ್ಲ,ಏನೇ ಮಾಡಿದರೂ ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಲಾಗಿದೆ ಎಂದರು.

ನಾನು ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ವಿವಿಧ ಯೋಜನೆಗಳನ್ನು ರೈತರಿಗೆ, ದೀನ ದಲಿತರಿಗೆ, ಮಹಿಳೆಯರಿಗೆ ಹಾಗೂ ಜನಸಾಮಾನ್ಯರಿಗೆ ತಲುಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಹೆಚ್ಚಿನ ಮತಗಳಿಂದ ಆಯ್ಕೆಮಾಡಬೇಕು ಎಂದರು.

ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ,ಶಾಸಕ ಗಣೇಶ ಹುಕ್ಕೇರಿ,ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಮಾತನಾಡಿದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಲಕ್ಷಣರಾವ ಚಿಂಗಳೆ,ಮಾಜಿ ಸಚಿವ ವೀರಕುಮಾರ ಪಾಟೀಲ,ಮಾಜಿ ಶಾಸಕ ಕಾಕಾಸಾಹೇಬ ಪಾಟೀಲ, ರಾಜೇಂದ್ರ ವಡ್ಡರ, ಸತೀಶ ಪಾಟೀಲ,ರಾಕೇಶ ಚಿಂಚಣೆ, ವರ್ಧಮಾನ ಸದಲಗೆ,ಸತೀಶ ಕುಲಕರ್ಣಿ,ಅರುಣ ದೇಸಾಯಿ, ಅನಿಲ ಪಾಟೀಲ,ರವಿ ಹಂಪನ್ನವರ,ರಾಜು ಗುಂಡಕಲ್ಲೆ, ರಾಜು ಕೋಟಗಿ,ಬಾಳಾಸಾಹೇಬ ಪಾಟೀಲ,ಸೂರ್ಯಕಾಂತ ಚೌಗುಲೆ,ಸಂತೋಷ ನವಲೆ ಉಪಸ್ಥಿತರಿದ್ದರು


Share with Your friends

You May Also Like

More From Author

+ There are no comments

Add yours