“ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಖಾತೆ ಸಚಿವರಾದ ಶ್ರೀಮತಿ ಅನ್ನಪೂರ್ಣಾದೇವಿ ನೇತೃತ್ವದಲ್ಲಿ ನಡೆದ ಶಿಕ್ಷಣ ಇಲಾಖೆ ನಿರ್ದೇಶಕ ಮಂಡಳಿಯ ಸದಸ್ಯರ ಸಭೆ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ನಗರದಲ್ಲಿ ಮಾನ್ಯ ಕೇಂದ್ರ ಶಿಕ್ಷಣ ಇಲಾಖೆಯ ರಾಜ್ಯ ಖಾತೆ ಸಚಿವರಾದ ಶ್ರೀಮತಿ ಅನ್ನಪೂರ್ಣಾದೇವಿ ಅವರ ನೇತೃತ್ವದಲ್ಲಿ ನಡೆದ ತಾಲೂಕು ಶಿಕ್ಷಣ ಇಲಾಖೆ ನಿರ್ದೇಶಕ ಮಂಡಳಿಯ ಸದಸ್ಯರ ಸಭೆಯಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಯವರು ಭಾಗವಹಿಸಿ, ಮಾತನಾಡಿದರು.

ಈ ವೇಳೆ ಮಾನ್ಯ ಸಚಿವರು ಶಿಕ್ಷಣ ಸಂಸ್ಥೆಗಳ ಪ್ರಾಂಶುಪಾಲರು, ಪ್ರಾಧ್ಯಾಪಕರು, ಶಿಕ್ಷಕರೊಂದಿಗೆ ಸಂವಾದ ನಡೆಸಿ, ಶಿಕ್ಷಣ ಕ್ಷೇತ್ರದ ಆಧುನೀಕರಣ ಮತ್ತು ಹೊಸ ಶಿಕ್ಷಣ ನೀತಿ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಚಿಕ್ಕೋಡಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾದ ಸೌ.ಶಾಂಭವಿ ಅಶ್ವತಪೂರ, ಶ್ರೀ ಚಂದ್ರಕಾಂತ ಕೊಟಿವಾಲೆ, ಶ್ರೀ ಜಯವಂತ ಭಾಟಲೆ, ನೀತಾ ಬಾಗಡಿ, ನಗರಸಭೆ ಸದಸ್ಯರು, ಶಿಕ್ಷಣ ಇಲಾಖೆ ನಿರ್ದೇಶಕ ಮಂಡಳಿ ಸದಸ್ಯರು ಹಾಜರಿದ್ದರು.


Share with Your friends

You May Also Like

More From Author

+ There are no comments

Add yours