ವರದಿ : ಮಿಯಾಲಾಲ ಕಿಲ್ಲೇದಾರ
ಕಾಗವಾಡ :–
ಕೃಷ್ಣಾ ನದಿಯ ನೀರಿನ ಅಭಾವ ಹಾಗೂ ರೈತರ ಸಂಕಷ್ಟವನ್ನು ಅರಿತು ಮಂಗಳವಾರ ದಿ 25 ಎಪ್ರಿಲ್ ರಂದು ಕಾಗವಾಡ ಮತಕ್ಷೇತ್ರದ ಜನಪ್ರಿಯ ಶಾಸಕರು, ರೈತ ನಾಯಕರು ಹಾಗೂ ಕಾಗವಾಡ ವಿಧಾನಸಭಾ ಮತಕ್ಷೇತ್ರದ ಬಿಜೆಪಿ ಪಕ್ಷದ ಅಭ್ಯರ್ಥಿಯಾದ ಸನ್ಮಾನ್ಯ ಶ್ರೀ ಶ್ರೀಮಂತ (ತಾತ್ಯಾ) ಪಾಟೀಲ ಅವರು ಮಾನ್ಯ ಮಹಾರಾಷ್ಟ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಸನ್ಮಾನ್ಯ ಶ್ರೀ ದೇವೇಂದ್ರ ಪಡ್ನವಿಸ್ ಅವರನ್ನು ಭೇಟಿಯಾಗಿ
ಕೊಯ್ನಾ /ವಾರಣಾ ಡ್ಯಾಮನಿಂದ ಕೃಷ್ಣಾ ನದಿಗೆ 3 TMC ನೀರನ್ನು ಹರಿಸಲು ವಿನಂತಿಸಿದರು. ಮಾನ್ಯ ಶಾಸಕರ ಮನವಿಗೆ ಸ್ಪಂದಿಸಿದ ಉಪಮುಖ್ಯಮಂತ್ರಿಗಳು ಹಾಗೂ ನೀರಾವರಿ ಸಚಿವರು ಈ ಕೂಡಲೇ ಮಹಾರಾಷ್ಟ ರಾಜ್ಯದಿಂದ ಕೃಷ್ಣಾ ನದಿಗೆ ನೀರನ್ನು ಹರಿಸಲು ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದರು.
ಈ ಸಮಯದಲ್ಲಿ ಸ್ಥಳೀಯ ಮುಖಂಡರು, ರೈತ ಬಾಂಧವರು ಉಪಸ್ಥಿತರಿದ್ದರು.ಇದು ಸಾರ್ವಜನಿಕರ ಪ್ರಶಂಸೆ ಹಾಗೂ ಶ್ಲಾಘನೆಗೆ ಪಾತ್ರವಾಯಿತು.
+ There are no comments
Add yours