“ಕ್ಷೇತ್ರದ ಜನರ ಆಶಿರ್ವಾದ ನನ್ನ ಮೇಲಿದೆ” – ಸಚಿವೆ ಶಶಿಕಲಾ ಜೊಲ್ಲೆ

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ

ನಿಪ್ಪಾಣಿ :–

ತಾಲೂಕಿನ ಗೊಂದುಗುಪ್ಪಿ ಗ್ರಾಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಬಿರುಸಿನ ಪ್ರಚಾರ ಕೈಗೊಂಡರು. ಮಲಗೊಂಡಾ ಪಾಟೀಲ, ಸರ್ಜೇರಾವ ಪಾಟೀಲ, ಆನಂದರಾವ ಪಾಟೀಲ, ಬಾಜಿರಾವ ಭೋಸಲೆ, ಮತ್ತಿತರರು ಇದ್ದಾರೆ.
ಕ್ಷೇತ್ರದ ಜನರ ಆಶಿರ್ವಾದ ನನ್ನ ಮೇಲಿದೆ – ಸಚಿವೆ ಶಶಿಕಲಾ ಜೊಲ್ಲೆ
ಕ್ಷೇತ್ರಾದ್ಯಂತ ಬಿರುಸಿನ ಪ್ರಚಾರ – ಮತದಾರರಿಂದ ಭರ್ಜರಿ ಬೆಂಬಲ
‘ಕಳೆದ ಎರಡು ಬಾರಿಯ ಅವಧಿಯಲ್ಲಿ ಕ್ಷೇತ್ರದ ಸರ್ವತೋಮುಖ ಅಭಿವೃದ್ದಿಗೆ ಶ್ರಮಿಸಿದ್ದು, ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿರುವ ಹಿನ್ನಲೆಯಲ್ಲಿ ಕ್ಷೇತ್ರದ ಜನರ ಆಶೀರ್ವಾದ ಸದಾ ನನ್ನ ಮೇಲಿದೆ’ ಎಂದು ಸ್ಥಳೀಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಾಗೂ ಮುಜರಾಯಿ, ಹಜ್ ಮತ್ತು ವಕ್ಫ್ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.
ತಾಲೂಕಿನ ಹಣಬರವಾಡಿ, ದತ್ತವಾಡಿ, ಶೆಂಡೂರ, ಗೊಂದಿಕೊಪ್ಪಿ ಗ್ರಾಮದಲ್ಲಿ ಬುಧವಾರ ಚುನಾವಣಾ ಪ್ರಚಾರ ಕೈಗೊಂಡು ಅವರು ಮಾತನಾಡಿದರು. ‘ಕಳೆದ ಎರಡು ಬಾರಿ ಶಾಸಕಿಯಾಗಿ ಆಯ್ಕೆ ಮಾಡುವ ಮೂಲಕ ಕ್ಷೇತ್ರದಲ್ಲಿ ಆಭಿವೃದ್ದಿ ಕಾರ್ಯಗಳನ್ನು ಕೈಗೊಳ್ಳುವ ಸದವಕಾಶ ನೀಡಿದ್ದೀರಿ. ಕ್ಷೇತ್ರದ ಮತದಾರರು ನನ್ನ ಮೇಲಿಟ್ಟ ಭರವಸೆಯನ್ನು ನಾನು ಉಳಿಸಿಕೊಂಡಿದ್ದೇನೆ. ಕಳೆದ ೧೦ ವರ್ಷಗಳಲ್ಲಿ ಸುಮಾರು ೨ ಸಾವಿರ ಕೋಟಿ ರೂ.ಗಳಿಗೂ ಹೆಚ್ಚಿನ ಅನುದಾನದಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ. ಜನಸಾಮಾನ್ಯರ ಬೇಡಿಕೆಗಳಿಗೆ ಸೂಕ್ತವಾಗಿ ಸ್ಪಂದಿಸಿದ್ದು, ಕ್ಷೇತ್ರದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದ್ದೇನೆ. ಈ ಎಲ್ಲಾ ಕಾರ್ಯಗಳ ಹಿನ್ನಲೆಯಲ್ಲಿ ಕ್ಷೇತ್ರದ ಮತದಾರರು ಮತ್ತೊಮ್ಮೆ ಆಶೀರ್ವದಿಸಲಿದ್ದಾರೆ’ ಎಂದು ಹೇಳಿದರು.
ಕ್ಷೇತ್ರದ ಬಿಜೆಪಿ ಪ್ರಮುಖರು ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಅಭ್ಯರ್ಥಿ ಶಶಿಕಲಾ ಅ ಜೊಲ್ಲೆ ಅವರಿಗೆ ಸಾಥ್ ನೀಡಿದರು. ಈ ಸಂದರ್ಭದಲ್ಲಿ ಹಾಲಶುರ್ ಕಾರ್ಖಾನೆಯ ಉಪಕಾರ್ಯಾಧ್ಯಕ್ಷ ಮಲಗೊಂಡಾ ಪಾಟೀಲ ಸಿದ್ದು ನರಾಟೆ, ಸರ್ಜೇರಾವ ಪಾಟೀಲ, ಆನಂದರಾವ ಪಾಟೀಲ, ಬಾಜಿರಾವ ಭೋಸಲೆ, ಪಾಂಡುರಂಗ ಪಾಟೀಲ, ಮಹಾದೇವ ಸುತಾರ, ಗಣಪತಿ ಚೌಗುಲೆ, ಆತ್ಮಾರಾಮ ಚೌಗಲೆ, ಸಂತೋಷ್ ನಾಯಿಕ, ಪ್ರವೀಣ ಗಿರಿ, ಮೊದಲಾದವರು ಸೇರಿದಂತೆ ಪಕ್ಷದ ಕಾರ್ಯಕರ್ತರು ಸ್ಥಳೀಯ ಮುಖಂಡರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.


Share with Your friends

You May Also Like

More From Author

+ There are no comments

Add yours