ವರದಿ : ಮಿಯಾಲಾಲ ಕಿಲ್ಲೇದಾರ
ನಿಪ್ಪಾಣಿ :–
ನಗರದಲ್ಲಿ ವಿವಿಧ ಇಲಾಖೆಯ ತಾಲೂಕ ಮಟ್ಟದ ಅಧಿಕಾರಿಗಳೊಂದಿಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿ ಯವರು ಟಾಸ್ಕ್ ಫೋರ್ಸ್ ಸಭೆಯನ್ನು ನಡೆಸಿ ಅಧಿಕಾರಿಗಳಿಗೆ ಅಗತ್ಯ ಸಲಹೆ ಸೂಚನೆಗಳನ್ನು ನೀಡಿದರು.
![](https://intelligencertimes.com/wp-content/uploads/2024/01/Screenshot_20240131_123030.jpg)
ಮುಂಬರುವ ದಿನಗಳಲ್ಲಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆವಿದ್ದಲ್ಲಿ ತ್ವರಿತವಾಗಿ ಬೋರವೆಲ್ ಗಳನ್ನು ರಿಪೇರಿ ಮಾಡಿ, ಟ್ಯಾಂಕರ್ ಮೂಲಕ ಅವಶ್ಯವಿದಲ್ಲಿ ನೀರನ್ನು ಪೂರೈಸಬೇಕು. ಒಂದುವೇಳೆ ನೀರಿನ ಕೊರತೆವಾದಲ್ಲಿ ಜೊಲ್ಲೆ ಗ್ರೂಪ್ ವತಿಯಿಂದ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುವುದು.ರೈತರ ದನ -ಕರುಗಳಿಗೆ ಮೇವಿನ ಸಮಸ್ಯೆ ಆಗದಂತೆ ಹಾಗೂ ವಿಧ್ಯುತ್ ಅಭಾವ ಆಗದಂತೆ ನೋಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
ಈ ಸಂದರ್ಭದಲ್ಲಿ ತಹಶೀಲ್ದಾರರಾದ ಶ್ರೀ ಮುಜಾಫರ್ ಬಳಿಗಾರ, ತಾ.ಪಂ.ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ರವಿಕುಮಾರ ಹುಕ್ಕೇರಿ, ಹೆಸ್ಕಾಂ ಎಇಇ, ಅಕ್ಷಯ ಚೌಗುಲೆ, ತಾಲೂಕಿನ ಎಲ್ಲ ಅಧಿಕಾರಿಗಳು, ಪಿ.ಡಿ.ಓ.ಗಳು ನಗರಸಭೆ ಸದಸ್ಯರು ಉಪಸ್ಥಿತರಿದ್ದರು.
+ There are no comments
Add yours