“ಸಾರ್ವಜನಿಕ ಸಭೆಯಲ್ಲಿ ಸೇರಿದ ಜನಸ್ತೋಮವೇ ಮತ್ತೊಮ್ಮೆ ಬಿಜೆಪಿಗೆ ಗೆಲುವು ಸಾಧಿಸಲಿದೆ ಎಂಬುದಕ್ಕೆ ಸಾಕ್ಷಿ”

Estimated read time 1 min read
Share with Your friends

ವರದಿ : ಮಿಯಾಲಾಲ ಕಿಲ್ಲೇದಾರ
ರಾಯಬಾಗ :–

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ವಿಜಯದ ಪತಾಕೆ ಹಾರಿಸಲಿದೆ”

ವಿಧಾನಸಭಾ ಚುನಾವಣೆ ಅಂಗವಾಗಿ ಕುಡಚಿ ವಿಧಾನಸಭಾ ಕ್ಷೇತ್ರದ ಹಾರೂಗೇರಿ ಯಲ್ಲಿ, ಗೌರವಾನ್ವಿತ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಮುಜರಾಯಿ, ಹಜ ಮತ್ತು ವಕ್ಫ್ ಇಲಾಖೆಯ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಹಾಗೂ ಚಿಕ್ಕೋಡಿ ಲೋಕಸಭೆ ಸಂಸದರಾದ ಮಾನ್ಯ ಶ್ರೀ ಅಣ್ಣಾಸಾಹೇಬ ಜೊಲ್ಲೆ ಯವರು ಪಾಲ್ಗೊಂಡು, ಮಾತನಾಡಿದರು.

ಸಾರ್ವಜನಿಕ ಸಭೆಯಲ್ಲಿ ಸೇರಿದ ಜನಸ್ತೋಮವೇ ಮತ್ತೊಮ್ಮೆ ಬಿಜೆಪಿಗೆ ಗೆಲುವು ಸಾಧಿಸಲಿದೆ ಎಂಬುದಕ್ಕೆ ಸಾಕ್ಷಿ. ನಮ್ಮ ಸರ್ಕಾರದ ಜನಪರ ಹಾಗೂ ಅಭಿವೃದ್ಧಿ ಪರ ಯೋಜನೆಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ಇದರ ಫಲವಾಗಿ ಮತ್ತೊಮ್ಮೆ ಜನರು ನಮ್ಮ ಪಕ್ಷಕ್ಕೆ ಆಶೀರ್ವದಿಸಲಿದ್ದಾರೆ ಎಂಬ ವಿಶ್ವಾಸವಿದೆ.

ಈ ಸಂದರ್ಭದಲ್ಲಿ ಸಚಿವರು, ಸಂಸದರು,ಶಾಸಕರು, ಪಕ್ಷದ ಪ್ರಮುಖರು, ಕಾರ್ಯಕರ್ತರು, ಮತದಾರ ಬಾಂಧವರು ಪಾಲ್ಗೊಂಡಿದ್ದರು.


Share with Your friends

You May Also Like

More From Author

+ There are no comments

Add yours